Monday, February 24, 2025
Monday, February 24, 2025

ಅಧಿವಕ್ತಾ ಪರಿಷತ್: ಪ್ರಶಿಕ್ಷಣ ವರ್ಗ

ಅಧಿವಕ್ತಾ ಪರಿಷತ್: ಪ್ರಶಿಕ್ಷಣ ವರ್ಗ

Date:

ಉಡುಪಿ, ಸೆ.5: ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ
ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ ನಾಗರಾಜ್ ರವರ ‘ಕೃಷ್ಣಾನುಗೃಹ’ ನಿವಾಸದಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಡುಪಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದಂತ ಬಿ ನಾಗರಾಜ್ ಅವರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ದಕ್ಷಿಣ ಪ್ರಾಂತ್ಯದ ಕಾರ್ಯಧ್ಯಕ್ಷ ನ್ಯಾಯವಾದಿ ಗುರುಪ್ರಸಾದ್ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಪ್ರಮೋದ್ ಹಂದೆ, ನ್ಯಾಯವಾದಿ ಅಮೃತಕಲಾ ಉಪಸ್ಥಿತರಿದ್ದರು. ಅಭ್ಯಾಸ ವರ್ಗವು ಮೂರು ಅವಧಿಯಲ್ಲಿ ನಡೆಯಿತು.

ಅಭ್ಯಾಸ ವರ್ಗದ ವಿಷಯಗಳಾದ ಭಾರತೀಯ ನ್ಯಾಯ ಸಂಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಖ್ಯಾತ ವಕೀಲರಾಗಿರುವ ಅಮರ್ ಕೊರೆಯ, ಕಮರ್ಷಿಯಲ್ ಕೋರ್ಟ್ ಆಕ್ಟ್ ಕುರಿತು ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಎಂ ಎನ್ ಕುಮಾರ್ ಮತ್ತು ಸಂಘಟನಾತ್ಮಕ ವಿಷಯದ ಬಗ್ಗೆ ಮಂಗಳೂರು ವಕೀಲರಾದ ಜಗದೀಶ್ ಕೆಆರ್ ಇವರುಗಳು ಮಾಹಿತಿಯನ್ನು ನೀಡಿದರು. ಸಮಾರೋಪ ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಧಿವ್ಯಕ್ತ ಪರಿಷತ್ತಿನ ದಕ್ಷಿಣ ಪ್ರಾಂತದ ಉಪಾಧ್ಯಕ್ಷರಾದ ರೋಹಿತ್ ಗೌಡ ಮತ್ತು ಮಂಗಳೂರು ವಿಭಾಗದ ಸಂಚಾಲಕ ಚೇತನ್ ನಾಯಕ್ ಎಸ್ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಅಧಿವಕ್ತಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ ವಂದಿಸಿದರು. ನ್ಯಾಯವಾದಿ ಸಂತೋಷ್ ಕುಮಾರ್ ಮೂಡುಬೆಳ್ಳೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!