Monday, February 24, 2025
Monday, February 24, 2025

ಜ್ಞಾನಸುಧಾ: ಜಾಂಬವತಿ ಕಲ್ಯಾಣ

ಜ್ಞಾನಸುಧಾ: ಜಾಂಬವತಿ ಕಲ್ಯಾಣ

Date:

ಗಣಿತನಗರ, ಸೆ.9: ಕಾರ್ಕಳ ಜ್ಞಾನಸುಧಾದ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ, ದಶಮಾನೋತ್ಸವದ ಸಂಭ್ರಮದಲ್ಲಿರುವ ಹವ್ಯಾಸಿ ಯಕ್ಷಗಾನ ಕಲಾವಿದರ ಸಂಗಮವಾಗಿರುವ ಜ್ಞಾನಸುಧಾದ ‘ಯಕ್ಷೆತ್ಕರ್ಷ’ ಬಳಗದಿಂದ, ‘ಜಾಂಬವತಿ ಕಲ್ಯಾಣ’ ಯಕ್ಷಗಾನ ತಾಳಮದ್ದಳೆ ಜರುಗಿತು. ಸ.ಪ.ಪೂ.ಕಾಲೇಜು ಬೈಲೂರಿನ ಭೌತಶಾಸ್ತ್ರ ಉಪನ್ಯಾಸಕ ಗೋಪಾಲಕೃಷ್ಣ ಗೋರೆಯವರ ನಿರ್ದೇಶನದಲ್ಲಿ ಜರುಗಿದ ‘ಜಾಂಬವತಿ ಕಲ್ಯಾಣ’ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಸ,ಪ.ಪೂ.ಕಾಲೇಜು ಬೈಲೂರು ಇಲ್ಲಿನ ರಸಾಯನಶಾಸ್ತ್ರ ಉಪನ್ಯಾಸಕರಾದ ಸೀತಾರಾಮ್ ಭಟ್ ಬೈಲೂರು, ಮದ್ದಳೆಯಲ್ಲಿ, ‘ಯಕ್ಷೆತ್ಕರ್ಷ’ದ ತರಬೇತುದಾರ, ಆನಂದ್ ಗುಡಿಗಾರ್ ಕೆರ್ವಾಶೆ, ಚೆಂಡೆಯಲ್ಲಿ ಶ್ರೀನಿಧಿ ಆಚಾರ್, ಚಕ್ರತಾಳದಲ್ಲಿ ರಂಜಿತ್ ಪಾಟ್ಕರ್ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಥಧಾರಿಗಳಾಗಿ ಶ್ರೀರಾಮನ ಪಾತ್ರದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿ, ಶ್ರೀಕೃಷ್ಣನ ಗೋಪಾಲ ಕೃಷ್ಣ ಗೋರೆ, ಬಲರಾಮನಾಗಿ ಸ.ಪ.ಪೂ.ಕಾಲೇಜಿನ ಮುನಿಯಾಲಿನ ಗಣಿತ ಉಪನ್ಯಾಸಕ ಅನಿಲ್ ಕುಮಾರ್, ಸತ್ರಾರ್ಜಿತನ ಪಾತ್ರದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, ಜಾಂಬವಂತನ ಪಾತ್ರದಲ್ಲಿ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಹಾಗೂ ‘ಯಕ್ಷೆತ್ಕರ್ಷ’ದ ನಿರ್ವಾಹಕಿ ಸಂಗೀತಾ ಕುಲಾಲ್, ಜಾಂಬವತಿಯಾಗಿ ಗಣಿತ ಶಿಕ್ಷಕಿ ಆಜ್ಞಾ ಸೋಹಂ, ನಾರದನಾಗಿ ಸಂಸ್ಥೆಯ ನಿರ್ವಹಣಾ ವಿಭಾಗದ ಶೇಖರ್ ಶೆಟ್ಟಿ, ಪ್ರಸೇನನ ಪಾತ್ರದಲ್ಲಿ ಗಣಿತ ಉಪನ್ಯಾಸಕ ಶ್ರೇಯಾನ್ ಜೈನ್ ಮಿಂಚಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!