Saturday, September 21, 2024
Saturday, September 21, 2024

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

Date:

ಉಡುಪಿ, ಸೆ.12: ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ ಚಾಮರಾಜ ನಗರದ ವರೆಗೆ 250 ಕಿ.ಮೀ ವರೆಗೆ 25 ಲಕ್ಷ ಜನರು ಮಾನವ ಸರಪಳಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ರೋಟರಿ ಸಂಸ್ಥೆಯ ಸದಸ್ಯರುಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತವಾಗಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಮಾನವ ಸರಪಳಿಯು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೂಲಕ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಮಾನವ ಸರಪಳಿ ಆರಂಭಗೊಂಡು ಬಿಜೂರು, ಉಪ್ಪುಂದ, ಕಾರ್ಗಲ್, ಕಂಬದಕೋಣೆ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೊಸಾಡು, ಹೆಮ್ಮಾಡಿ, ಕಟ್‌ಬೆಲ್ತೂರು, ತಲ್ಲೂರು, ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಕೋಟ, ಕೋಟತಟ್ಟು, ಸಾಲಿಗ್ರಾಮ, ಪಾಂಡೇಶ್ವರ, ಐರೋಡಿ, ಹಂದಾಡಿ, ವಾರಂಬಳ್ಳಿ, ಚಾಂತಾರು, ಹಾರಾಡಿ, ಉಪ್ಪೂರು, ಅಂಬಲಪಾಡಿ, ಕಡೆಕಾರ್, ಉದ್ಯಾವರ, ಕಟಪಾಡಿ, ಕೋಟೆ, ಇನ್ನಂಜೆ, ಬಡಾ, ತೆಂಕ, ಪಡುಬಿದ್ರೆ ಗ್ರಾಮ ಪಂಚಾಯತ್ ಮೂಲಕ ಹಾದು ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸೇರುತ್ತದೆ ಎಂದರು.

ಜಿಲ್ಲೆಯಲ್ಲಿ ಏರ್ಪಡಿಸಲಾಗುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರು, ಕುಟುಂಬ ಸಮೇತ ಕ್ರಿಯಾಶೀಲರಾಗಿ ಪಾಲ್ಗೊಂಡು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸೋಣ ಎಂದರು. ಇದೇ ಸಂದರ್ಭದಲ್ಲಿ ಕುಂಜಾರುಗಿರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಮಾನವ ಸರಪಳಿಯನ್ನು ರಚಿಸಿ, ಪ್ರಜಾಪ್ರಭುತ್ವವನ್ನು ಸಂಭ್ರಮಿಸೋಣ, ಮಾನವ ಸರಪಳಿಯನ್ನು ನಿರ್ಮಿಸೋಣ ಎಂಬ ಘೋಷಣೆಗಳನ್ನು ಕೂಗಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ. ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕಾಪು ತಹಶೀಲ್ದಾರ್ ಪ್ರತಿಭಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!