Wednesday, October 23, 2024
Wednesday, October 23, 2024

ಆಸ್ಕರ್ ಫೆರ್ನಾಂಡಿಸ್ ಪುಣ್ಯತಿಥಿ ಆಚರಣೆ

ಆಸ್ಕರ್ ಫೆರ್ನಾಂಡಿಸ್ ಪುಣ್ಯತಿಥಿ ಆಚರಣೆ

Date:

ಉಡುಪಿ, ಸೆ.13: ಕಾಂಗ್ರೆಸ್ ಪಕ್ಷದ ಮುಖಂಡ ದಿ.ಆಸ್ಕರ್ ಫೆರ್ನಾಂಡೀಸ್ ಅವರ ಮೂರನೇ ಪುಣ್ಯತಿಥಿ ಆಚರಣೆಯನ್ನು ಕಾಂಗ್ರೆಸ್ ಭವನದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಸ್ತಾವಿಕವಾಗಿ ಮಾತನಾಡುತ್ತಾ, ನಿರಂತರವಾಗಿ ತನ್ನ ಜೀವವನ್ನು ಜನತಾ ಸೇವೆಗೆ ಮುಡಿಪಾಗಿಟ್ಟವರು ಆಸ್ಕರ್ ಫೆರ್ನಾಂಡೀಸ್ ರವರು. ಉಡುಪಿಯ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ. ಕಾಂಗ್ರೆಸ್ ಪಕ್ಷವನ್ನು ಉಡುಪಿಯಲ್ಲಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು. ಆಸ್ಕರ್ ಫೆರ್ನಾಂಡೀಸ್ ರವರ ಒಡನಾಡಿ ರೆ.ಫಾದರ್ ವಿಲಿಯಂ ಮಾರ್ಟೀಸ್ ರವರು ಆಸ್ಕರ್ ರವರ ಗುಣಗಾನ ಮಾಡಿ ಸರಳ ವ್ಯಕ್ತಿತ್ವದ ಜನನಾಯಕ ಆಸ್ಕರ್ ಅವರ ಸೇವೆಯನ್ನು ಮರೆಯಲು ಅಸಾಧ್ಯ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದವರು ಎಂದು ಹೇಳಿ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷರಾದ ಅಣ್ಣಯ್ಯ ಸೇರಿಗಾರ್ ವಂದಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ಎಮ್.ಎ ಗಪೂರ್, ಬಿ. ನರಸಿಂಹಮೂರ್ತಿ, ವೆರೋನಿಕಾ ಕರ್ನೆಲಿಯೋ, ಮಹಾಬಲ ಕುಂದರ್, ಭಾಸ್ಕರ್ ರಾವ್ ಕಿದಿಯೂರು, ಬಿ. ಕುಶಲ್ ಶೆಟ್ಟಿ, ಕೇಶವ ಕೋಟ್ಯಾನ್, ಜ್ಯೋತಿ ಹೆಬ್ಬಾರ್, ಉದ್ಯಾವರ ನಾಗೇಶ್ ಕುಮಾರ್, ರೆನಾಲ್ಡ್ ಪ್ರವೀಣ್ ಕುಮಾರ್, ಪ್ರಶಾಂತ್ ಜತ್ತನ್ನ, ಶಶಿಧರ್ ಶೆಟ್ಟಿ ಉಲ್ಲೂರು, ಜಯಕುಮಾರ್, ಯುವರಾಜ್, ಆನಂದ್ ಪೂಜಾರಿ, ರಮಾನಂದ ಪೈ, ಉಪೇಂದ್ರ ಗಾಣಿಗ, ಲಕ್ಷ್ಮೀಶ ಶೆಟ್ಟಿ, ಶ್ರೀಧರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು...

ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ, ಅ.22: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು...

ಅ. 26-27: ಬ್ರಹ್ಮಾವರದಲ್ಲಿ ಕೃಷಿ ಮೇಳ

ಉಡುಪಿ, ಅ.22: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ...
error: Content is protected !!