Monday, February 24, 2025
Monday, February 24, 2025

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

Date:

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ನಡೆಯಿತು. ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ. ಎಸ್. ಕಾರಂತ ಮಾತನಾಡಿ, ಸಮಾಜದ ಓರೆಕೋರೆಗಳನ್ನು ತಿದ್ದಲು ಸಂಘಸಂಸ್ಥೆಗಳ ಪಾತ್ರ ಗಣನೀಯವಾದದ್ದು ಈ ನಿಟ್ಟಿನಲ್ಲಿ ವಿಪ್ರ ವಲಯ ಸಾಲಿಗ್ರಾಮ ಸಾಕಷ್ಟು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗಿದೆ ಎಂದರು. ಇದೇ ವೇಳೆ ರಂಗಕಲಾವಿದೆ ಸುಧಾ ಮಣೂರು ಇವರಿಗೆ ಸನ್ಮಾನಿಸಲಾಯಿತು. ರಾಜ್ಯ ಜಾನಪದ ಪ್ರಪಂಚ ಪ್ರಶಸ್ತಿ 2024 ಪುರಸ್ಕೃತೆ ಜಾಹ್ನವಿ ಹೇರ್ಳೆ ಇವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಧಾರ್ಮಿಕ ಸಂಘಟನೆಯಾದ ಶ್ರೀ ಮಹಾವಿಷ್ಣು ಭಜನಾ ಸಂಘ ಪಾರಂಪಳ್ಳಿ ಇವರನ್ನು ಗುರುತಿಸಿ ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ ಅಧ್ಯಕ್ಷೆ ವನಿತಾ ಉಪಾಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ಕೆ.ಅನಂತ ಪದ್ಮನಾಭ ಐತಾಳ್, ಬ್ರಹ್ಮಾವರ ತಾಲೂಕು ಮಹಿಳಾ ವಲಯದ ಅಧ್ಯಕ್ಷೆ ಮಂಜುಳ ಅಡಿಗ ಉಪಸ್ಥಿತರಿದ್ದರು. ಸುಜಾತ ಬಾಯರಿ ವರದಿ ವಾಚಿಸಿದರು. ಸನ್ಮಾನ ಪತ್ರವನ್ನು ಡಾ.ಸವಿತಾ ಉಪಾಧ್ಯಾಯ, ಶುಭ ಅಡಿಗ ವಾಚಿಸಿದರು. ಸ್ಮಿತಾ ರಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಪ್ರಿತಾ ಪುರಾಣಿಕ ನಿರೂಪಿಸಿದರು. ಶಿವ ಪ್ರಭಾ ಅಲ್ಸೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!