Saturday, September 21, 2024
Saturday, September 21, 2024

ನಿವೃತ್ತ ಯೋಧ ಮೇಜರ್ ಗಣೇಶ ಅಡಿಗರಿಗೆ ಸನ್ಮಾನ

ನಿವೃತ್ತ ಯೋಧ ಮೇಜರ್ ಗಣೇಶ ಅಡಿಗರಿಗೆ ಸನ್ಮಾನ

Date:

ಕೋಟ: ಭಾರತೀಯ ಸೇನಾ ವಿಭಾಗದಲ್ಲಿ 31 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸಾಲಿಗ್ರಾಮದ ಪಾರಂಪಳ್ಳಿಯ ನಿವಾಸಿ ಗಣೇಶ ಅಡಿಗ ಇವರನ್ನು ವಿವೇಕ ಪ.ಪೂ.ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು.

ವಿವೇಕ ಪಪೂ ಕಾಲೇಜಿನ ಸಭಾಂಗಣದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ
ಕೆ. ಜಗದೀಶ ನಾವಡ ನಿವೃತ್ತ ಯೋಧರನ್ನು ಪರಿಚಯಿಸಿ, ಸ್ವಾಗತಿಸಿ ಇವರು 1990 ಮದ್ರಾಸ್ ಇಂಜಿನಿಯರ್
ಗ್ರೂಪ್ ಬೆಂಗಳೂರಿನಲ್ಲಿ ಸೇರ್ಪಡೆಗೊಂಡು ಮಿಲಿಟರಿ
ತರಬೇತಿ ಪೂರೈಸಿ, ಭಾರತೀಯ ಸೇನೆಯ, ಭೂಸೇನೆಯಲ್ಲಿ 18 ವರ್ಷ, ವಾಯುಸೇನೆಯಲ್ಲಿ 11 ವರ್ಷ ಮತ್ತು ನೌಕಾಸೇನೆಯಲ್ಲಿ 2 ವರ್ಷ ಸೇವೆ ಸಲ್ಲಿಸುವ ಮೂಲಕ ಸೇನೆಯ ಮೂರು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಅಪರೂಪ ಅವಕಾಶ ಪಡೆದ ಗಣೇಶ ಅಡಿಗ ಮತ್ತು 31 ವರ್ಷಗಳ
ಪೂರ್ಣ ಸೇವೆ ಸಲ್ಲಿಸಿ 7 ಹಂತದ ಪದೋನ್ನತಿ ಹೊಂದಿ ಕೊನೆಯಲ್ಲಿ ಸುಬೇದಾರ್ ಮೇಜರ್ ಆಗಿ ನಿವೃತ್ತಿ
ಹೊಂದಿದ ಅವರ ಕಾರ್ಯಕ್ಷಮತೆಗೆ ಗೌರವ ಲೆಪ್ಟಿನೆಂಟ್ ಬಿರುದನ್ನು ಪಡೆದಿರುವ ನಮ್ಮ ಸಂಸ್ಥೆಯ ಮೊದಲ ಮತ್ತು ಹೆಮ್ಮೆಯ ಹಳೆಯ ವಿದ್ಯಾರ್ಥಿ ಎಂದು ತಿಳಿಸಿ ಇಂದಿನ ವಿದ್ಯಾರ್ಥಿಗಳಿಗೆ ನಿಜವಾಗಿ ಅವರು ಆದರ್ಶಪ್ರಾಯರು, ಅನುಸರಣೀಯರು ಎಂದು ತಿಳಿಸಿದರು.

ಸನ್ಮಾನ ಸ್ವೀಕರಿಸಿ ಮತನಾಡಿದ ಗಣೇಶ ಅಡಿಗ, ತನ್ನ ವಿದ್ಯಾಭ್ಯಾಸದ ದಿನಗಳನ್ನು ಮತ್ತು ಸೇನೆಯಲ್ಲಿನ ತನ್ನ ಅನುಭವಗಳನ್ನು ಹಂಚಿಕೊಂಡು ಎಲ್ಲಾ ವಿದ್ಯಾರ್ಥಿಗಳಲ್ಲಿಯೂ ಪ್ರತಿಭೆ ಇರುತ್ತದೆ ಆದರೆ ಸಿಕ್ಕ ಅವಕಾಶವನ್ನ ಸದುಪಯೋಗಿಸಿಕೊಂಡು ನಿರಂತರ
ಪರಿಶ್ರಮದಿಂದ ಉತ್ತುಂಗ ಸ್ಥಾನಕ್ಕೆ ಬರಲು ಸಾಧ್ಯ ಎಂದು ತಿಳಿಸಿದರು.

ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಸೇನೆಗೆ ಸೇರಲು ವಿವಿಧ ಅವಕಾಶಗಳ ಬಗ್ಗೆ ವಿವರಿಸಿದರು. ಕಾಲೇಜಿನ ಉಪನ್ಯಾಸಕ ವರ್ಗ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಸದಾಶಿವ ಹೊಳ್ಳ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!