Monday, February 24, 2025
Monday, February 24, 2025

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

ವಾರದಲ್ಲಿ ನಾಲ್ಕು ದಿನಗಳ ಕಾಲ ಪೌಷ್ಠಿಕ ಆಹಾರವಾಗಿ ಮೊಟ್ಟೆ ವಿತರಣೆ

Date:

ಉಡುಪಿ, ಸೆ.25: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಅನುದಾನದಿಂದ ವಾರಕ್ಕೆ ಎರಡು ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ ಬಾಳೆಹಣ್ಣು ಇವುಗಳನ್ನು ವಿತರಿಸಲಾಗುತ್ತಿತ್ತು. ಅಜೀಮ್ ಪ್ರೇಮ್ ಜಿ ಫೌಂಡೇಶನ್ ವತಿಯಿಂದ ವಾರದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ನೀಡುವ ಕಾರ್ಯಕ್ರಮಕ್ಕೆ ಬುಧವಾರ ಸರ್ಕಾರಿ ಪದವಿಪೂರ್ವ ಕಾಲೇಜಿನ(ಬೋರ್ಡ್ ಹೈ ಸ್ಕೂಲ್)ನಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಅಪೌಷ್ಟಿಕತೆಯಿಂದ ಬಳಲಬಾರದು. ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆಯು ಸಹಕಾರಿಯಾಗಿದ್ದು, ಸರಕಾರ ರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಾರದ ಎಲ್ಲಾ ದಿನಗಳಲ್ಲೂ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು ರೂಪಾಯಿ 1500 ಕೋಟಿ ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಕೆ. ಕ್ಷೇತ್ರ ಶಿಕ್ಷಣಾಧಿಕಾರಿ ಡಾಕ್ಟರ್ ಎಲ್ಲಮ್ಮ, ಪಿಎಂ ಪೋಶನ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ.ಅಶೋಕ ಕಾಮತ್, ಡಯಟ್‌ನ ಉಪನ್ಯಾಸಕ ಯೋಗನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕರು ವಿವೇಕ ಗಾಂವ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!