Monday, February 24, 2025
Monday, February 24, 2025

ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸಿ: ಪತ್ರಕರ್ತ ರವೀಂದ್ರ ಕೋಟ

ಮುಂದಿನ ಭವಿಷ್ಯಕ್ಕಾಗಿ ಪರಿಸರ ಉಳಿಸಿ ಬೆಳೆಸಿ: ಪತ್ರಕರ್ತ ರವೀಂದ್ರ ಕೋಟ

Date:

ಕೋಟ, ಸೆ.27: ಪರಿಸರದ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸುವ ಅವಶ್ಯಕತೆಯಿದೆ ತನ್ಮೂಲಕ ಮುಂದಿನ ಪೀಳಿಗೆಗಾಗಿ ನಾವೆಲ್ಲರು ಗಿಡ ನೆಟ್ಟು ಪರಿಸರ ಸ್ವಚ್ಛವಾಗಿರಿಸಲು ಪಣತೊಡೋಣ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಕೋಟದ ವಿವೇಕ ವಿದ್ಯಾ ಸಂಸ್ಥೆಯ ಸ್ವರ್ಣಭವನದಲ್ಲಿ ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ವಾರದ ವಿಶೇಷ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಉಪನ್ಯಾಸ ನೀಡಿದ ಅವರು, ಪ್ರಸ್ತುತ ಕಾಲಘಟ್ಟದಲ್ಲಿ ಅತಿಯಾಗಿ ಬಳಕೆ ಮಾಡುತ್ತಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ತ್ಯಾಜ್ಯಗಳಿಂದ ಮನುಕುಲದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ, ಹಚ್ಚ ಹಸುರಿನ ಪ್ರಕೃತಿಯನ್ನು ಪ್ರವಾಸೋದ್ಯಮದ ನೆಪದಲ್ಲಿ ಹಾಳುಗೆಡವುತ್ತಿದ್ದೇವೆ. ಇದರಿಂದ ಪ್ರಸ್ತುತ ತಾಪಮಾನ, ಪ್ರಾಕೃತಿಕ ವಿಕೋಪಗಳನ್ನು ಎದುರಿಸುವಂತೆ ಆಗಿದೆ. ಇದೇ ರೀತಿ ಮುಂದುವರೆದರೆ ನಮ್ಮ ಅವನತಿ ಕಟ್ಟಿಟ್ಟ ಬುತ್ತಿ. ಪರಿಸರಕ್ಕಾಗಿ ಇಂದಿನಿಂದಲೇ ಜಾಗೃತರಾಗೋಣ ಆ ಮೂಲಕ ಮಾಲಿನ್ಯ ರಹಿತ ಪರಿಸರ ನಮ್ಮದಾಗಿಸಿಕೊಳ್ಳೋಣ ಎಂದು ಕರೆ ನೀಡಿದರು. ರೋಟರಿ ಕ್ಲಬ್ ವತಿಯಿಂದ ಪತ್ರಕರ್ತ ರವೀಂದ್ರ ಕೋಟ ಇವರನ್ನು ಗೌರವಿಸಲಾಯಿತು. ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಅನಿಲ್ ಸುವರ್ಣ ವಹಿಸಿದ್ದರು.

ರೋಟರಿ ಕ್ಲಬ್ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ರೋಟರಿ ಮಾಜಿ ಜಿಲ್ಲಾ ಸಹಾಯಕ ಗರ್ವನರ್ ಸತೀಶ್ ಶೆಟ್ಟಿ, ಮುಂದಿನ ಸಹಾಯಕ ಗವರ್ನರ್ ಶ್ಯಾಮಸುಂದರ್ ನಾಯರಿ, ಆನ್ಸ್ ಕ್ಲಬ್ ಅಧ್ಯಕ್ಷೆ ರೇವತಿ ಎಸ್ ನಾಯರಿ, ರೋಟರಿ ಕ್ಲಬ್ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ್ ಮೆಂಡನ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ವೆಂಕಟೇಶ ಆಚಾರ್, ಉದಯ್ ಕುಮಾರ್ ಶೆಟ್ಟಿ, ಸದಸ್ಯರಾದ ಶರತ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಗಣೇಶ್ ಯು., ವಲಯ ಸೇನಾನಿ ನಿತ್ಯಾನಂದ್ ನಾಯರಿ, ಗೌರವ ಸದಸ್ಯರಾದ ಲಂಬೋಧರ ಹೆಗಡೆ ಮುಂತಾದವರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ದಯಾನಂದ್ ಆಚಾರ್ ಸ್ವಾಗತಿಸಿ, ನಿರೂಪಿಸಿದರು. ಮಾಜಿ ಅಧ್ಯಕ್ಷ ಸುರೇಶ್ ಆಚಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!