Sunday, February 23, 2025
Sunday, February 23, 2025

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

ಸಾಹಿತ್ಯದ ಓದಿನಿಂದ ವಿಕಸನ: ರಾಜೇಂದ್ರ ಭಟ್ ಕೆ

Date:

ಕಾರ್ಕಳ, ಸೆ.28: ಸಾಹಿತ್ಯದ ಓದಿನಿಂದ ನಮ್ಮ ಭಾಷೆ ಶುದ್ಧವಾಗುವುದರಿಂದ ಸಂವಹನ ಸುಲಭವಾಗುತ್ತದೆ. ಅಕಾಡೆಮಿಕ್ ಕಲಿಕೆಯು ವೇಗ ಪಡೆಯುತ್ತದೆ. ಮೌಲ್ಯಗಳು ಅಂತರ್ಗತ ಆಗುತ್ತವೆ ಮತ್ತು ವ್ಯಕ್ತಿತ್ವದ ವಿಕಸನವೂ ಖಾತರಿ ಆಗುತ್ತದೆ. ಅದರಿಂದ ವಿದ್ಯಾರ್ಥಿಗಳು ತುಂಬಾ ಓದುವುದು ಮತ್ತು ಬರೆಯುವುದು ಅಗತ್ಯ ಎಂದು ಶಿಕ್ಷಕರೂ, ವಿಕಸನದ ರಾಷ್ಟ್ರಮಟ್ಟದ ತರಬೇತುದಾರರೂ ಆದ ರಾಜೇಂದ್ರ ಭಟ್ ಕೆ ಅವರು ಅಭಿಪ್ರಾಯಪಟ್ಟರು. ಅವರು ಕಾರ್ಕಳದ ಎಸ್ ವಿ ಟಿ ಮಹಿಳಾ ಪದವಿ ಕಾಲೇಜಿನ ಸಾಹಿತ್ಯ ಸಂಘವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮುಂದೆ ಅವರು ವಿದ್ಯಾರ್ಥಿನಿಯರ ಜೊತೆಗೆ ‘ಸಾಹಿತ್ಯದ ವಿವಿಧ ಆಯಾಮಗಳು’ ಎಂಬ ವಿಷಯದ ಮೇಲೆ ಸಂವಾದ ಮಾಡಿದರು. ಕಾಲೇಜಿನ ಪ್ರಾಚಾರ್ಯರಾದ ಪ್ರೊ ಉಷಾ ನಾಯಕ್ ಅವರು ಅಧ್ಯಕ್ಷತೆ ವಹಿಸಿ ಬದುಕಿಗೆ ಅರ್ಥ ನೀಡುವ ಸಾಹಿತ್ಯದ ಓದು ಇಂದಿನ ಅಗತ್ಯ ಎಂದು ಹೇಳಿದರು.

ಸಾಹಿತ್ಯ ಸಂಘದ ನಿರ್ದೇಶಕಿ ವಿನುತ ಕಾಮತ್ ಅವರು ಅತಿಥಿಗಳನ್ನು ಪರಿಚಯ ಮಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ವಿದ್ಯಾರ್ಥಿ ನಾಯಕರಾದ ಶ್ರೇಯಾ ಮತ್ತು ರಕ್ಷಾ ವೇದಿಕೆಯಲ್ಲಿದ್ದರು. ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!