Tuesday, October 1, 2024
Tuesday, October 1, 2024

ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು: ಕಿರಣ್ ಎಸ್ ಗಂಗಣ್ಣವರ್

ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು: ಕಿರಣ್ ಎಸ್ ಗಂಗಣ್ಣವರ್

Date:

ಉಡುಪಿ, ಅ.1: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ ಸ್ಥಾನವಿದ್ದು, ಅವರನ್ನು ಪ್ರೀತಿ, ಸಹಾನುಭೂತಿಯಿಂದ ಕಾಣುವುದರೊಂದಿಗೆ ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಇಂದು ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ (ರಿ.), ಹಿರಿಯ ನಾಗರಿಕರ ಸಂಸ್ಥೆಗಳು, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ (ರಿ.), ವೃದ್ಧಾಶ್ರಮಗಳು ಮತ್ತು ಕೆನರಾ ಬ್ಯಾಂಕ್, ಪ್ರಾದೇಶಿಕ ಕಛೇರಿ ವಲಯ 1 ಮತ್ತು 2 ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಹಿರಿಯ ನಾಗರಿಕರ ದಿನಾಚರಣೆ ಆಚರಣೆಯು ಯುವಜನತೆಗೆ ಹಿರಿಯರ ಮಹತ್ವದ ಕುರಿತು ಮನದಟ್ಟು ಮಾಡುವ ಜೊತೆಗೆ ಅವರ ಹಕ್ಕು ಮತ್ತು ಭದ್ರತೆಯ ಬಗೆಗೆ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು. ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ಸರ್ಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ನ್ಯಾಯಾಲಯಗಳ ಪ್ರಕರಣಗಳಲ್ಲಿ ಸಹ ಅವರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಸರಿಯಾದ ರೀತಿಯಲ್ಲಿ ಅವುಗಳ ಪ್ರಯೋಜನವನ್ನು ಪಡೆದಾಗ ಮಾತ್ರವೇ ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ತಡೆಗಟ್ಟಿ ಉತ್ತಮವಾಗಿ ಜೀವಿಸಲು ಸಹಕಾರಿಯಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರಿಕರು ಯಾರ ಮೇಲು ಅವಲಂಭಿತವಾಗದೇ ಸ್ವತಂತ್ರವಾಗಿ ಜೀವನ ನಡೆಸಲು ಬೇಕಾದ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಅವರಿಗಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಅನುಭವಿಸುವ ಅವಕಾಶವನ್ನು ಅವರಿಗೆ ಕಲ್ಪಿಸಬೇಕು ಎಂದ ಅವರು, ಹಿರಿಯ ನಾಗರಿಕರಿಗಾಗಿ ಆಯೋಜಿಸಿದ್ದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬ ಹಿರಿಯ ನಾಗರಿಕರು ಅತ್ಯಂತ ಲವಲವಿಕೆಯಿಂದ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದ್ದಾರೆ ಎಂದರು. ಹಿರಿಯ ನಾಗರಿಕರು ಯಾವುದೇ ಕೆಲಸದ ನಿಮಿತ್ತ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಕಾಣುವುದರೊಂದಿಗೆ ಅವರಿಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು ಹಿರಿಯ ನಾಗರಿಕರು ಗುರುತಿನ ಚೀಟಿ ಪಡೆಯದೇ ಇದ್ದಲ್ಲಿ ಈ ಕೂಡಲೇ ಪಡೆಯುವಂತೆ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಆರೋಗ್ಯ ತಪಾನಣೆಯನ್ನು ನಡೆಸಲಾಯಿತು ಹಾಗೂ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಂಸ್ಕೃತಿ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮನು ಹಂದಾಡಿ ಅವರಿಂದ ನಕ್ಕು ನಲಿ ವಿಶೇಷ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮಿನಾರಾಯಣ ಕಾರಂತ್, ಎಂ.ಜಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಎ., ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಪ್ರವೀಣ್ ಕುಮಾರ್, ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಕಾರ್ತಿಕೇಯನ್, ಹಿರಿಯ ನಾಗರಿಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಹಿರಿಯ ನಾಗರಿಕರ ಜಿಲ್ಲಾ ಒಟ್ಟೂಟದ ಅಧ್ಯಕ್ಷ ಹೆಚ್. ವಿಶ್ವನಾಥ್ ಸ್ವಾಗತಿಸಿ, ಡಾ, ಗಣನಾಥ್ ಎಕ್ಕಾರು ನಿರೂಪಿಸಿ, ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿ ರತ್ನಾ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪುಸ್ತಕ ಓದಿ ಬಹುಮಾನ ಗೆಲ್ಲಿ

ಉಡುಪಿ, ಅ.1: ಉಡುಪಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ...

ಥ್ರೋಬಾಲ್: ಶಮಿತ್ ಖಾರ್ವಿ ರಾಜ್ಯಮಟ್ಟಕ್ಕೆ

ಉಡುಪಿ, ಅ.1: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಹಿಂದೂ...

ಅರ್ಹರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ: ಜಿಲ್ಲಾಧಿಕಾರಿ

ಉಡುಪಿ, ಅ.1: ಜಗತ್ತಿನಲ್ಲಿ ಮಾನವನ ರಕ್ತಕ್ಕೆ ಯಾವುದೇ ಪರ್ಯಾಯವಿಲ್ಲ. ಒಂದೊಂದು ರಕ್ತದ...

ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ: ಪ್ರೊ. ಧರ್ಮ

ವಿದ್ಯಾಗಿರಿ, ಅ.1: ನಾವು ಸೇವಿಸುವ ಆಹಾರ ಯಾವುದೇ ಬಾಹ್ಯ ಅಂಶಗಳಿಂದ ನಿರ್ಧರಿತವಾಗಿರಬಾರದು....
error: Content is protected !!