Monday, February 24, 2025
Monday, February 24, 2025

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನ

ಉಡುಪಿ: ಬಿಜೆಪಿ ಸದಸ್ಯತ್ವ ಅಭಿಯಾನ

Date:

ಉಡುಪಿ, ಅ.2: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾಧ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ನೇತೃತ್ವದಲ್ಲಿ ಉಡುಪಿ ನಗರದ ಮೀನು ಮಾರುಕಟ್ಟೆ, ರಿಕ್ಷಾ ನಿಲ್ದಾಣ, ಹಾಗೂ ಅಂಗಡಿ ಮುಗ್ಗಟ್ಟುಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಸಾರ್ವಜನಿಕರು ಮಿಸ್ ಕಾಲ್ ನೀಡಿ ಬಿಜೆಪಿ ಸದಸ್ಯತ್ವ ಪಡೆದರು. ಅಕ್ಟೋಬರ್ 15 ರ ತನಕ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಪೇಟೆಗಳು, ಫಾಕ್ಟರಿಗಳು, ಜಿಮ್, ಸಂತೆಗಳು, ಮೀನು ಮಾರುಕಟ್ಟೆ, ರಿಕ್ಷಾ ನಿಲ್ದಾಣ, ಬಸ್ ಸ್ಟಾಂಡ್ ಬಂದರು ಹಾಗೂ ಜನಸಂದಣಿ ಸೇರುವ ಪ್ರದೇಶಗಳಲ್ಲಿ ಯುವಮೋರ್ಚಾ ಅಭಿಯಾನ ನಡೆಸಲಿದೆ ಎಂದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾಪು, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಶಶಾಂಕ್ ಶಿವತ್ತಾಯ, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ, ಉಡುಪಿ ನಗರದ ಜಿಲ್ಲೆಯ ಹಾಗೂ ವಿವಿಧ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!