Friday, October 4, 2024
Friday, October 4, 2024

ರಾಸು ಕಳ್ಳತನ; ನಿಯಮ ಮೀರಿ ಜಾನುವಾರು ಮಾರಾಟ: ಕಾನೂನು ಕ್ರಮಕ್ಕೆ ಆಗ್ರಹ

ರಾಸು ಕಳ್ಳತನ; ನಿಯಮ ಮೀರಿ ಜಾನುವಾರು ಮಾರಾಟ: ಕಾನೂನು ಕ್ರಮಕ್ಕೆ ಆಗ್ರಹ

Date:

ಕೋಟ, ಅ.4: ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000 ಲೀಟರ್ ಮಾರಾಟವಾಗುತ್ತಿದ್ದು ಪ್ರಸ್ತುತ 1,10,000 ಲೀಟರ್ ಶೇಖರಣೆಯಾಗುತ್ತಿದೆ. ಕಾರಣ ನಿಯಮ ಮೀರಿ ಹೊರ ಜಿಲ್ಲೆಗಳಿಗೆ ಜಾನುವಾರು ಮಾರಾಟ ಮಾಡುತ್ತಿದ್ದು ಇದರಿಂದ ಹಾಲು ಶೇಖರಣೆ ಕಡಿಮೆಯಾಗುತ್ತಿದೆ.

ಗ್ರಾಹಕರಿಗೆ ಬೇಕಾಗುವಷ್ಟು ಹಾಲು ಮತ್ತು ಹಾಲಿನ ಉತ್ಪನ್ನ ನೀಡಲು ಸಾದ್ಯವಾಗುತ್ತಿಲ್ಲ ದಿನೇದಿನೇ ಹಾಲು ಶೇಖರಣೆ ಕಡಿಮೆಯಾಗುತ್ತಿರುವ ಹಿನ್ನಲೆಯಲ್ಲಿ ರಾಸುಗಳನ್ನು ಮಾರಾಟ ಮಾಡುವ ಸಂದರ್ಭದಲ್ಲಿ ನಿಯಮ ಸಡಿಲಗೊಳಿಸಬಾರದೆಂದು ಹಾಗೂ ರಾಸು ಕಳ್ಳತನವಾದಾಗ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಉಡುಪಿ ಜಿಲ್ಲೆಗಳಲ್ಲಿ ದಲ್ಲಾಳಿಗಳು ಮನೆಮನೆಗೆ ಬಂದು ರಾಸು ಮಾರಾಟಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ದಿನಗಳಲ್ಲಿ ತಹಶೀಲ್ದಾರರು, ಪೋಲಿಸ್ ನಿರೀಕ್ಷಕರು ಮತ್ತು ಪಶುವೈದ್ಯಾಧಿಕಾರಿಯವರು ಕಾನೂನು ಪ್ರಕಾರ ಜಾನುವಾರು ಸಾಗಾಟ ಮಾಡಲು ಅನುಮತಿಯನ್ನು ನೀಡುವಂತೆ ಬ್ರಹ್ಮಾವರ ತಾಲೂಕು ದಂಡಾಧಿಕಾರಿಗಳಿಗೆ ಸೇರಿದಂತೆ ಬ್ರಹ್ಮಾವರ ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ಪೆಕ್ಟರ್ ದಿವಾಕರ್ ರವರಿಗೆ ಮನವಿ ನೀಡಲಾಯಿತು. ಬ್ರಹ್ಮಾವರ ಹಾಲು ನೌಕರರ ತಾಲೂಕು ಅಧ್ಯಕ್ಷ ರಾಕೇಶ್ ನಾಯಕ್ ಶಿರಿಯಾರ, ಹಂದಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಸರಸ್ವತಿ ಮುಂತಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!