Saturday, October 5, 2024
Saturday, October 5, 2024

ರೈತಧ್ವನಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ರೈತಧ್ವನಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Date:

ಕೋಟ, ಅ.4: ಕೋಟದ ರೈತಧ್ವನಿ ಸಂಘಟನೆ ಇದರ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ರೈತರ ಬೇಡಿಕೆಗಳಿಗೆ ಜಿಲ್ಲಾಡಳಿತದ ಮೂಲಕ ಸರಕಾರದ ಕದ ತಟ್ಟುವ ಕಾರ್ಯ ನಿಜಕ್ಕೂ ಆಶಾದಾಯಕ ಬೆಳವಣಿಗೆಯಾಗಿದೆ. ರೈತರ ಸಮಸ್ಯೆಗಳನ್ನು ಆಡಳಿತ ಚೌಕಟ್ಟಿನಲ್ಲಿ ಬಗೆಹರಿಸಿ ಪ್ರಸ್ತುತ ಎದುರಾಗಿರುವ ಭತ್ತಕ್ಕೆ ನೈಜ ಬೆಲೆ ಹಾಗೂ ನೆರೆ ಹಾವಳಿಗೆ ತುತ್ತಾಗುವ ಕೃತಕ ನೆರೆಗೆ ಮುಕ್ತಗಾಣಿಸಲು ಯೋಜನೆ ಸಿದ್ಧಪಡಿಸಿ ರೈತ ಸಮುದಾಯಕ್ಕೆ ಇನ್ನಷ್ಟು ಶಕ್ತಿ ತುಂಬುವ ಕಾರ್ಯ ಆಗಬೇಕು, ಅದು ಸಂಘಟನೆಗಳ ಹೋರಾಟದ ಹಾದಿಯಿಂದ ಮಾತ್ರ ಸಾಧ್ಯ. ಈ ದಿಸೆಯಲ್ಲಿ ಹೊಸ ನೋಂದಣಿ ಅಭಿಯಾನ ಮತ್ತಷ್ಟು ಬಲ ತುಂಬಲು ಸಾಧ್ಯವಾಗುತ್ತದೆ. ಪ್ರತಿಯೋರ್ವ ರೈತರು ಈ ಅಭಿಯಾನಕ್ಕೆ ಕೈಜೋಡಿಸಿ ಎಂದು ಕರೆ ನೀಡಿದರು. ಸಂಘಟನೆಯ ಅಧ್ಯಕ್ಷ ಎಂ.ಜಯರಾಮ್ ಶೆಟ್ಟಿ, ರೈತ ಸಂಘಟನೆಯ ಪ್ರಮುಖರಾದ ಎಂ. ಶಿವ ಪೂಜಾರಿ, ಬಾಬು ಶೆಟ್ಟಿ, ಮಹೇಶ್ ಶೆಟ್ಟಿ, ರಾಘವೇಂದ್ರ ಶೆಟ್ಟಿ, ಭಾಸ್ಕರ್ ಶೆಟ್ಟಿ, ನಾಗರಾಜ್ ಗಾಣಿಗ ಸಾಲಿಗ್ರಾಮ, ರಮೇಶ್ ಮೆಂಡನ್, ಕೀರ್ತಿಶ್ ಪೂಜಾರಿ, ದಿನೇಶ್ ಪೂಜಾರಿ, ಸಂತೋಷ್ ಕುಮಾರ್, ಸುರೇಶ್ ಕೋಟ, ತಿಮ್ಮ ಕಾಂಚನ್, ನಿತ್ಯಾನಂದ, ಪ್ರಕಾಶ್ ಶೆಟ್ಟಿ ಸೇರಿದಂತೆ ಮುಂತಾದವರು ಇದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೇತ್ರಶಾಸ್ತ್ರದ ಅಗತ್ಯತೆಗಳು – ಭಾರತೀಯ ಸಾಮರ್ಥ್ಯ-ಆಧಾರಿತ ವೈದ್ಯಕೀಯ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕ ಬಿಡುಗಡೆ

ಮಣಿಪಾಲ, ಅ.4: ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ), ನೇತ್ರಶಾಸ್ತ್ರದ ಅಗತ್ಯತೆಗಳು,...

ಸಮಾಜಮುಖಿ ಕಾರ್ಯಗಳಿಗೆ ಸ್ಪಂದಿಸುವುದೇ ಶಿಕ್ಷಣದ ಮೂಲ ಉದ್ದೇಶ: ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ, ಅ.4: ನಾಲ್ಕು ಗೋಡೆಗಳ ನಡುವೆ ಕಲಿಯುವ ಪಾಠ ಮಾತ್ರವೇ ಶಿಕ್ಷಣವಲ್ಲ....

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಸಾರ್ವಜನಿಕರು ಮುಂಜಾಗ್ರತೆ ವಹಿಸಿ

ಉಡುಪಿ, ಅ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ...
error: Content is protected !!