Monday, February 24, 2025
Monday, February 24, 2025

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

ಮಾಣಿಬೆಟ್ಟು- ಪ್ರಾಚ್ಯ: ತೌಳವ ಕರ್ಣಾಟ ಶೀರ್ಷಿಕೆಯಡಿಯಲ್ಲಿ ಪುಷ್ಕರಣಿ ಸ್ವಚ್ಛತಾ ಕಾರ್ಯಕ್ರಮ

Date:

ಶಿರ್ವ, ಅ.6: ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ-ಕುಕ್ಕೆ ಸುಬ್ರಹ್ಮಣ್ಯ, ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಹಾಗೂ ಉಡುಪಿಗೆ ಬನ್ನಿ-ಯೂಟ್ಯೂಬ್ ಚಾನೆಲ್ ಇವರ ಜಂಟಿ ಸಹಯೋಗದಲ್ಲಿ ಪ್ರಾಚ್ಯ: ತೌಳವ ಕರ್ಣಾಟ ಎಂಬ ಶೀರ್ಷಿಕೆಯಡಿಯಲ್ಲಿ ಶಿರ್ವ ಗ್ರಾಮದ ವ್ಯಾಪ್ತಿಗೆ ಒಳಪಡುವ ಮಾಣಿಬೆಟ್ಟು ಪ್ರದೇಶದಲ್ಲಿನ ಪ್ರಾಚೀನ ಪುಷ್ಕರಣಿಯ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುಷ್ಕರಣಿಯಿರುವ ಸ್ಥಳದ ಮಾಲೀಕರಾದ ಬಾಲಕೃಷ್ಣ ಉಪಾಧ್ಯಾಯ ಇವರ ನೇತೃತ್ವದಲ್ಲಿ ಸಮಾಜ ಸೇವಕ ಮತ್ತು ಕೊಡುಗೈ ದಾನಿ ವಿಶ್ವನಾಥ್ ಶೆಣೈ ಅವರು ನೆರವೇರಿಸಿದರು.

ಮುಖ್ಯ ಸಂಯೋಜಕರಾದ ಶ್ರೀನಿಕೇತನ ವಸ್ತುಸಂಗ್ರಹಾಲಯ & ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ-ಕುಕ್ಕೆ ಸುಬ್ರಹ್ಮಣ್ಯ ಇದರ ಉಪ ನಿರ್ದೇಶಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಇವರ ಜೊತೆ ಸಹ ಸಂಯೋಜಕರಾಗಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ ಇದರ ಅಧ್ಯಯನ ನಿರ್ದೇಶಕರಾದ ಪ್ರೊ. ಎಸ್.ಎ ಕೃಷ್ಣಯ್ಯ ಮತ್ತು ಉಡುಪಿಗೆ ಬನ್ನಿ-ಯೂಟ್ಯೂಬ್ ಚಾನೆಲ್ ಇದರ ಸ್ಥಾಪಕರಾದ ಡಾ. ಗಣೇಶ್ ಪ್ರಸಾದ್ ಜಿ. ನಾಯಕ್ ಉಪಸ್ಥಿತರಿದ್ದರು.

ಗತವೈಭವನ್ನು‌ ಮುಂದಿನ‌ ಪೀಳಿಗೆಗೆ ತಿಳಿಸಲು ಇಂತಹ ಇತಿಹಾಸ ಉಳಿಸಿ, ಸಂರಕ್ಷಿಸುವ ಕಾರ್ಯಗಳು ಇನ್ನೂ ನಡೆಯಬೇಕೆಂದು ಹಾಗೂ ನಮ್ಮ‌ಲ್ಲಿ‌ ಇತಿಹಾಸ‌ದ ಪ್ರಜ್ಞೆ ಮೂಡಲು ಪ್ರಾಚ್ಯ: ತೌಳವ ಕರ್ಣಾಟದ‌ ಈ ಅಭಿಯಾನಕ್ಕೆ ಎಲ್ಲರೂ ಕೈ‌ ಜೋಡಿಸಬೇಕೆಂದು ಕ್ರೆಡಿಟ್ ಕೊ- ಆಪರೇಟಿವ್ ಬ್ಯಾಂಕ್-ಉಡುಪಿ ಇದರ ವ್ಯವಸ್ಥಾಪಕರಾದ ಉಮೇಶ್ ಆಚಾರ್ಯ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಪುಷ್ಕರಣಿ ಸಂರಕ್ಷಣೆಯ ಜೊತೆಗೆ ಪರಿಸರ ಸಂರಕ್ಷಣೆಯೂ ಆಗಬೇಕೆಂದು ಹಾಗೂ ಪ್ರಾಚ್ಯ: ತೌಳವ ಕರ್ಣಾಟ ಇದರ ಉದ್ದೇಶ ಮತ್ತು ಮುಂದಿನ‌ ಯೋಜನೆಗಳ‌ ಬಗ್ಗೆ ಮಾಹಿತಿಯನ್ನು ಪ್ರೊ.‌ ಎಸ್.ಎ ಕೃಷ್ಣಯ್ಯ ಅವರು ವಿವರಿಸಿದರು.

ಮಾಣಿಬೆಟ್ಟು ಪರಿಸರದಲ್ಲಿರುವ ಈ ಪುಷ್ಕರಣಿಯು ಶಿರ್ವ ಗ್ರಾಮದಲ್ಲಿಯೇ ಪ್ರಾಚೀನವಾದುದಾಗಿದ್ದು, ಸುಮಾರು 14-15ನೆಯ ಶತಮಾನಕ್ಕೆ ಸೇರಿದೆ ಎಂದು ಅಧ್ಯಯನದಿಂದ ತಿಳಿದುಬಂದಿರುತ್ತದೆ. ಇಂತಹ ಪುಷ್ಕರಣಿಯು ಇಂದು ವಿನಾಶದಂಚಿನಲ್ಲಿದ್ದು ಈ ಪುಷ್ಕರಣಿಯ ರಕ್ಷಣಾ ಕಾರ್ಯವನ್ನು ಸ್ಥಳೀಯರ , ಇತಿಹಾಸ ಆಸಕ್ತರ, ಉತ್ಸಾಹಿ ವಿದ್ಯಾರ್ಥಿಗಳ, ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ನೆರವೇರಿಸಲಾಯಿತು. ಇಲ್ಲಿಯೇ 14ನೆ ಶತಮಾನದ ಅಪರಿಪೂರ್ಣ ಶಾಸನ ಕಲ್ಲಿ‌ನ ಸಂರಕ್ಷಣೆಯನ್ನು ಸಹ ಮಾಡಲಾಯಿತು. ಶ್ರಾವ್ಯಾ ಆರ್. ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!