Saturday, September 21, 2024
Saturday, September 21, 2024

ಉಡುಪಿ ಸೀರೆ- ವಿಶೇಷ ಅಂಚೆ ಲಕೋಟೆ ಅನಾವರಣ

ಉಡುಪಿ ಸೀರೆ- ವಿಶೇಷ ಅಂಚೆ ಲಕೋಟೆ ಅನಾವರಣ

Date:

ಉಡುಪಿ: ಭೌಗೋಳಿಕ ಮಾನ್ಯತೆ ಇರುವ ಹಾಗೂ ಉಡುಪಿಯ ಹೆಮ್ಮೆಯ ಪ್ರತೀಕವಾದ ಉಡುಪಿ ಸೀರೆಯ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಭಾರತೀಯ ಅಂಚೆ ಇಲಾಖೆ ಉಡುಪಿ ಸೀರೆಯ ವಿಶೇಷ ಅಂಚೆ ಲಕೋಟೆಯನ್ನು ಹೊರತಂದಿದ್ದು ಅದನ್ನು ಉಡುಪಿ ಅಂಚೆ ವಿಭಾಗದಲ್ಲಿ ಬಿಡುಗಡೆಗೊಳಿಸಲು ತುಂಬ ಸಂತಸವಾಗುತ್ತದೆ ಎಂದು ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕರಾದ ನವೀನ್ ಚಂದರ್ ಅನಿಸಿಕೆ ವ್ಯಕ್ತಪಡಿಸಿದರು.

ಉಡುಪಿ ಪ್ರಧಾನ ಅಂಚೆ ಕಚೇರಿಯ ಎರಡನೇ ಮಹಡಿಯಲ್ಲಿ ಉಡುಪಿ ಸೀರೆ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಮಾತನಾಡುತ್ತಾ, ಹಲವು ವರುಷಗಳ‌ ಹಿಂದೆ ಪದ್ಮಶಾಲಿ ಕುಟುಂಬದವರು ಮಾತ್ರವಲ್ಲದೆ ಇತರ ಜನರೂ‌ ಕೂಡಾ ಅಧಿಕ ಸಂಖ್ಯೆಯಲ್ಲಿ ಉಡುಪಿ ಸೀರೆ ಹಾಗೂ ಕೈ ಮಗ್ಗದ ಸೀರೆಗಳನ್ನು‌ ನೇಯುತ್ತಲಿದ್ದು ಇತ್ತೀಚಿನ ದಿನಗಳಲ್ಲಿ ಕೈ ಮಗ್ಗದ ಸೀರೆಗಳನ್ನು ನೇಯುವವರ ಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದ್ದು ಬೆರಳೆಣಿಕೆಯ ಹಿರಿಯರಷ್ಟೇ ಈ ವೃತ್ತಿಯನ್ನು‌ ಮುಂದುವರೆಸಿಕೊಂಡು ಬರುತ್ತಿದ್ದು ಉಡುಪಿ ಸೀರೆಯ ನೇಯ್ಗೆ ಕಾಯಕಕ್ಕೆ ಪುನಃಶ್ಚೇತನ ನೀಡಬೇಕಾಗಿದೆ ಎಂದರು.

ಇವತ್ತಿಗೂ ನೇಯ್ಗೆ ಕೆಲಸ ನಡೆಸುತ್ತಿರುವ ಹಿರಿಯ ನೇಕಾರರಾದ ಮಂಜುನಾಥ ಶೆಟ್ಟಿಗಾರ್ ರವರನ್ನು ಉಡುಪಿ ಅಂಚೆ ವಿಭಾಗದ ವತಿಯಿಂದ ಅಂಚೆ ಅಧೀಕ್ಷಕರು ಸನ್ಮಾನಿಸಿದರು.

ಹಿರಿಯ ಅಂಚೆ ಚೀಟಿ ಸಂಗ್ರಾಹಕ ಎಮ್ ಕೆ ಕೃಷ್ಣಯ್ಯ ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಉಡುಪಿ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣ ರಾಜ‌ವಿಠಲ ಭಟ್ ಸ್ವಾಗತಿಸಿದರು. ಉಡುಪಿ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆ ಪಾಲಕರಾದ ಗುರುಪ್ರಸಾದ್ ಪ್ರಸ್ತಾವನೆಯ ಮಾತುಗಳನ್ನಾಡಿದರು.

ಅಂಚೆ ಇಲಾಖಾ ಸಿಬ್ಬಂದಿ ಸುರೇಂದ್ರ ಕೋಟ್ಯಾನ್ ಪ್ರಾರ್ಥಿಸಿದರು. ಸಹಾಯಕ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ ವಂದಿಸಿದರು.

ಉಪ ಅಂಚೆ ನಿರೀಕ್ಷಕ ಮಾಧವ ಟಿ ವಿ ಉಪಸ್ಥಿತರಿದ್ದರು. ಅಂಚೆ ಇಲಾಖಾ ಸಿಬ್ಬಂದಿ ಲೀಲಾವತಿ ತಂತ್ರಿ ನಿರೂಪಿಸಿದರು. ಮಹಿಳಾ ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಡುಪಿ ಸೀರೆ ಉಟ್ಟು ಸಂಭ್ರಮಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!