Friday, February 28, 2025
Friday, February 28, 2025

ಬಜಗೋಳಿ- ಉಚಿತ ವೈದ್ಯಕೀಯ ಶಿಬಿರ

ಬಜಗೋಳಿ- ಉಚಿತ ವೈದ್ಯಕೀಯ ಶಿಬಿರ

Date:

ಬಜಗೋಳಿ: ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ ಕಾರ್ಕಳ, ಕೆ.ಎಂ.ಸಿ ಮಣಿಪಾಲ ಮತ್ತು ಮಂಗಳೂರು ಹಾಗೂ ರೋಟರಿ ಆಸ್ಪತ್ರೆ ಇದರ ವತಿಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಬಜಗೋಳಿ ಸರ್ಕಾರಿ ಶಾಲಾ ವಠಾರದಲ್ಲಿ ಇಂದು ನಡೆಯಿತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮೂಡರು ಪಂಚಾಯತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಈ ರೀತಿಯ ಸೂಪರ್ ಸ್ಪೆಷಾಲಿಟಿ ಶಿಬಿರ ಮೊದಲ ಬಾರಿಗೆ ನಡೆಯುತ್ತಿದೆ. ಗ್ರಾಮೀಣ ಭಾಗದ ಜನರಿಗೆ ಇದರಿಂದ ತುಂಬಾ ಪ್ರಯೋಜನವಾಗಿದೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರಿಯ ಅಧ್ಯಕ್ಷ ಮಹಾವೀರ ಹೆಗ್ಡೆ, ಉದ್ಯಮಿ ಸದಾಶಿವ ಪೂಜಾರಿ, ಶಾಲಾ ಶಿಕ್ಷಕಿ ಲಿಲ್ಲಿ ಟೀಚರ್, ಕೆ.ಎಂ.ಸಿಯ ತಜ್ಞ ವೈದ್ಯರಾದ ಡಾ. ಈಶ್ವರ್ ಕೀರ್ತಿ, ಡಾ. ಯೋಗಿಶ್ ಕಾಮತ್, ಡ. ರೊಹಿತ್ ಪೈ, ಡಾ. ಶ್ರೀನಾಥ್ ಶೆಟ್ಟಿ, ಡಾ. ವಿಧ್ಯಾ ಭಾಟ್, ಡಾ. ಅನುಷಾ ಶೆಟ್ಟಿ, ಡಾ. ಸುಹಾಸ್ ಮುಂತಾದವರು ಉಪಸ್ಥಿತರಿದ್ದರು.

ವೈದ್ಯಕೀಯ ಪ್ರಕೋಷ್ಠ ಜಿಲ್ಲಾ ಸಂಚಾಲಕ ಡಾ. ರಾಮಚಂದ್ರ ಕಾಮತ್ ಪ್ರಸ್ತಾವನೆಗೈದರು. ಶಿಬಿರದ ಮುಖ್ಯಸಂಘಟಕ ವೈದರಾದ ಡಾ. ರಾಮದಾಸ್ ಹೆಗ್ಡೆ ಸ್ವಾಗತಿಸಿ, ಡಾ. ಗಣೇಶ್ ಕಾಮತ್ ವಂದಿಸಿದರು. ರಾಘವೇಂದ್ರ ಕರ್ವಾಲು ನಿರೂಪಿಸಿದರು. ಸುಮಾರು 200 ಮಂದಿ ಶಿಬಿರದ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬ್ರಹ್ಮಾವರ: ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ, ಫೆ.27: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆರೂರು-ಮುಂಡ್ಕಿನಜೆಡ್ಡು-ಕೊಕ್ಕರ್ಣೆ-ನಾಲ್ಕೂರು (ಕೊಕ್ಕರ್ಣೆ- ನಾಲ್ಕೂರು ರಸ್ತೆ)...

ಹೀಟ್ ವೇವ್ (ಶಾಖದ ಹೊಡೆತ): ಸಾರ್ವಜನಿಕರು ರಕ್ಷಿಸಿಕೊಳ್ಳಲು ಸಲಹೆ-ಸೂಚನೆಗಳು

ಉಡುಪಿ, ಫೆ.27: ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ...

ಮಲಬಾರ್ ವಿಶ್ವರಂಗ ಪುರಸ್ಕಾರಕ್ಕೆ ಐವರು ಹಿರಿಯ ರಂಗಕರ್ಮಿಗಳು ಆಯ್ಕೆ

ಉಡುಪಿ, ಫೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗ ಅಧ್ಯಕ್ಷರಾಗಿ ಉದಯ ನಾಯ್ಕ್ ಆಯ್ಕೆ

ಉಡುಪಿ, ಫೆ.27: ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ವಿಭಾಗಕ್ಕೆ...
error: Content is protected !!