Monday, February 24, 2025
Monday, February 24, 2025

ಗೋವಿಗಾಗಿ ನಾವು ಅಭಿಯಾನದ 4ನೇ ಸರಣಿ ಕಾರ್ಯಕ್ರಮ

ಗೋವಿಗಾಗಿ ನಾವು ಅಭಿಯಾನದ 4ನೇ ಸರಣಿ ಕಾರ್ಯಕ್ರಮ

Date:

ಕೋಟ, ಅ.16: ಅನಾಥ ಗೋವುಗಳ ಆರೈಕೆ ಮಾಡುತ್ತಿರುವ ಗೋಶಾಲೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ ಜಯರಾಮ ಶೆಟ್ಟಿ ಹೇಳಿದರು. ಕೋಟತಟ್ಟು ಪಡುಕರೆಯಲ್ಲಿ ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹುಟ್ಟುಹಬ್ಬದ ಅಂಗವಾಗಿ ನಾಗೇಂದ್ರ ಪುತ್ರನ್ ಸಾರಥ್ಯದಲ್ಲಿ ಗೋವಿಗಾಗಿ ನಾವು ಪ್ರಚಾರಕ್ಕಲ್ಲ ಪ್ರೇರಣೆಗಾಗಿ ೪ ನೇ ಸರಣಿ ಕಾರ್ಯಕ್ರಮವನ್ನು ಚಾಲನೆ ನೀಡಿ ಅವರು ಮಾತನಾಡಿದರು. ಗೋಶಾಲೆಗಳನ್ನು ನಡೆಸುವುದು ಸುಲಭದ ಮಾತಲ್ಲ ಬದಲಾಗಿ ನಾವುಗಳು ಗೋವುಗಳ ಬಗ್ಗೆ ನೈಜ ಕಾರ್ಯಕ್ರಮಗಳನ್ನು ನೀಡಬೇಕು. ಈ ದಿಸೆಯಲ್ಲಿ ಗೋವಿಗಾಗಿ ನಾವು ಈ ತಂಡದ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ ಎಂದರು. ಗೋಪಾಲ್ ಬಂಗೇರ, ಗೋವಿಗಾಗಿ ನಾವು ತಂಡದ ಮುಖ್ಯಸ್ಥ ನಾಗೇಂದ್ರ ಪುತ್ರನ್, ಭರತ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಉದ್ಯಮಿ ವಿಕಾಸ್ ಹೆಗ್ಡೆ ಉಡುಪಿ ಇವರು ಮೇವು ಕೊಡುಗೆಯಾಗಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!