Friday, October 18, 2024
Friday, October 18, 2024

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ ಸೃಷ್ಟಿಸಿ ವಂಚನೆ ಪ್ರಕರಣ‌: ಆರೋಪಿಗೆ ಮಧ್ಯಂತರ ಜಾಮೀನು

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ ಸೃಷ್ಟಿಸಿ ವಂಚನೆ ಪ್ರಕರಣ‌: ಆರೋಪಿಗೆ ಮಧ್ಯಂತರ ಜಾಮೀನು

Date:

ಉಡುಪಿ, ಅ.17: ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಕಲಿ ಆರ್.ಸಿ ತಯಾರಿಸಿ ತೋರಿಸಿ ವಂಚಿಸಿ ಸುಂಕ ವಿನಾಯಿತಿಗೆ ಯತ್ನಿಸಿದ ಹಿನ್ನೆಲೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರಿನಲ್ಲಿ
ಆರೋಪಿ ಮಯ್ಯಾದಿ ಅಹ್ಮದ್ ಸಾಹೇಬ್ ಎಂಬುವವರು ತಮ್ಮ ಬೊಲೆನೋ ಕಾರಿನ ಆರ್.ಸಿಯನ್ನು ತಿರುಚಿ ಕೋಟ ಪಡುಕರೆ ನಿವಾಸಿ ಎಂಬಂತೆ ದಾಖಲೆ ಸೃಷ್ಟಿಸಿ ಅ.16ರಂದು ಆರೋಪಿಯು ಟೋಲ್ ಗೇಟ್ ಪಾಸ್‌ಮಾಡುವ ಸಂದರ್ಭ ಆರ್ ಸಿಯಲ್ಲಿ ತಿರುಚಿರುವುದು ಕಂಡುಬಂದಿದ್ದು, ಅನುಮಾನಗೊಂಡ‌ ಸಾಸ್ತಾನ ಟೋಲ್ ಗೇಟ್ ನ ಸಾರ್ವಜನಿಕ ಸಂಪರ್ಕ ಅಧಿಕಾರಿ ಯೋಗೇಶ್ ಸರಕಾರದ ಅಧಿಕೃತ ಜಾಲತಾಣ ಪರಿವಾಹನ್ ನಲ್ಲಿ ಪರಿಶೀಲಿಸಿದಾಗ ವಾಹನದ ಸಂಖ್ಯೆ ಕುಂದಾಪುರ ತಾಲೂಕಿನ ಕಾಳಾವರ ಗ್ರಾಮದ ವಿಳಾಸದಲ್ಲಿ ರಿಜಿಸ್ಟರ್ ಆಗಿರುವುದು ಕಂಡುಬಂದಿದೆ. ಹೆಜಮಾಡಿ ಟೋಲ್ಗೇಟ್ನಲ್ಲಿಯೂ ಪರಿಶೀಲಿಸಿದಾಗ ಅಲ್ಲಿಯೂ ಕೂಡ ಸ್ಥಳೀಯ ವಿಳಾಸದಲ್ಲಿ ನಕಲಿ ಆರ್.ಸಿ ಸಿದ್ದಪಡಿಸಿರುವುದು ಪತ್ತೆಯಾಗಿದೆ ಎಂದು ಆರೋಪಿಸಲಾಗಿದ್ದು ಈ ಬಗ್ಗೆ ಕೋಟ ಪೋಲಿಸರು ಆರೋಪಿಯನ್ನು ಬಂಧಿಸಿ ನ್ಯಾಯಾಧೀಶರ ಮನೆಗೆ ಹಾಜರು ಪಡಿಸಿದ್ದು ನ್ಯಾಯಾಲಯವು ಪ್ರಕರಣವು ಪ್ರಾಥಮಿಕವಾಗಿ ಸ್ಥಾಪಿತವಾಗಿಲ್ಲವೆಂದು ಪರಿಗಣಿಸಿ ಆರೋಪಿಗೆ ಮಧ್ಯಂತರ ಜಾಮೀನು ಆದೇಶಿಸಿರುತ್ತದೆ. ಆರೋಪಿಯ ಪರವಾಗಿ ನ್ಯಾಯವಾದಿ ಆರೂರು ಸುಕೇಶ್ ಶೆಟ್ಟಿಯವರು ವಾದಿಸಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!