Friday, October 18, 2024
Friday, October 18, 2024

ಸಮಾಜ ಸೇವಕ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

ಸಮಾಜ ಸೇವಕ ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ನಿಧನ

Date:

ಉಡುಪಿ, ಅ.17: ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ ಲಕ್ಷ್ಮಣೇರ್” ಎಂದೇ ಜನಪ್ರಿಯರಾಗಿಯೂ, ಪ್ರಗತಿಪರ ಕೃಷಿಕಾರ್ಯದಲ್ಲಿ ಸಾಧಕರಾಗಿಯೂ, ಕುಗ್ರಾಮದಲ್ಲಿ ಆಸ್ಪತ್ರೆಯಿಲ್ಲದೆ ದೂರದ ತಾಲೂಕಿನ ದೊಡ್ಡ ಆಸ್ಪತ್ರೆಗೆ ಹೋಗಬೇಕಾದ ಕಾಲದಿಂದಲೂ ನಾಟಿ ಔಷಧಿಯನ್ನು ಅದರಲ್ಲೂ ವಿಶೇಷತಃ ಜಾಂಡಿಸ್ (ಕಾಮಾಲೆ) ರೋಗ, ಸರ್ಪಸುತ್ತಿನಂತಹ ಕಾಯಿಲೆಗೆ ದೀನ ದುರ್ಬಲರಿಗೆ ಉಚಿತವಾಗಿ ನೀಡಿ ಸಮಾಜ ಸೇವಕರಾಗಿಯೂ, ತಲೆಮಾರುಗಳಿಂದ ರೆಂಜಾಳ ಮಾರಿಗುಡಿಯಲ್ಲಿ ಸೇವಾರೂಪದಲ್ಲಿ ನಿರಂತರ ದೇವಿಯ ನಿತ್ಯಸೇವೆಯನ್ನು ನಿರಪೇಕ್ಷೆ, ನಿಸ್ವಾರ್ಥರೂಪದಲ್ಲಿ ಸಲ್ಲಿಸಿದಕ್ಕೆ ದೇವಳದ ಜೀರ್ಣೋದ್ಧಾರದ ಸಂದರ್ಭದಲ್ಲಿ ಸನ್ಮಾನಿತರಾಗಿಯೂ, ಕುಗ್ರಾಮದಲ್ಲಿ ಶಾಲೆಯೇ ಇಲ್ಲದ ಸಂದರ್ಭದಲ್ಲಿ ಮಕ್ಕಳು ಶಿಕ್ಷಣ ವಂಚಿತರಾಗಲೇಬಾರದೆಂದು ತಮ್ಮ ಸ್ವಂತ ಸ್ಥಳವನ್ನೇ ಉಚಿತವಾಗಿ ದಾನ ನೀಡಿ ಸರ್ಕಾರಿ ಅಂಗನವಾಡಿ ಕಟ್ಟಡ ಕಟ್ಟಿಸಿ ಶ್ರೇಷತೆ ಮೆರೆದಿದ್ದ ನಾಯಕರು ಪತ್ನಿ, 2 ಪುತ್ರ, ಪುತ್ರಿ, ಮೊಮ್ಮಕ್ಕಳು ಸಹಿತ ಅಪಾರ ಬಾಂಧವರನ್ನು ಅಗಲಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಬ್ಬದುಳುಮೆ: ಹಳೆಗನ್ನಡ ಕಾವ್ಯದೋದು ಕಮ್ಮಟ

ತೆಂಕನಿಡಿಯೂರು, ಅ.18: ನೆಲವನ್ನು ಉತ್ತು ಅದರೊಡಲಿಗೆ ಕಾಳು ಬಿತ್ತಿ ಬಾಳು ಕಟ್ಟಿಕೊಂಡ...

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...
error: Content is protected !!