Monday, February 24, 2025
Monday, February 24, 2025

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

Date:

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ “ಚೈನ್” ಮಕ್ಕಳ ಸುಧಾರಿತ ಪೌಷ್ಠಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಜಿಲ್ಲಾಮಟ್ಟದಲ್ಲಿ ಮೊದಲನೇ ದಿನದ ತರಬೇತಿ ಕಾರ್ಯಾಗಾರ ಮಂಗಳವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಶ್ರೀ ಕೃಷ್ಣ ಸಭಾಂಗಣದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆಯನ್ನು ಶೀಘ್ರ ಪತ್ತೆ ಹಚ್ಚಿ ಅವುಗಳನ್ನು ಸಮುದಾಯದಲ್ಲಿ ನಿಯಂತ್ರಿಸುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಈ ತರಬೇತಿ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದರು. 6 ವರ್ಷದೊಳಗಿನ ಮಕ್ಕಳಿಗೆ ಸಾಂಸ್ಥಿಕ ಹಾಗೂ ಸಮುದಾಯ ಮಟ್ಟದಲ್ಲಿ ಅಪೌಷ್ಠಿಕತೆ ನಿವಾರಣೆಗಾಗಿ ಆರೈಕೆ ಮತ್ತು ಚಿಕಿತ್ಸೆ, ಪೌಷ್ಠಿಕ ಪುನಶ್ಚೇತನ ಹಾಗೂ ಸಾರ್ವಜನಿಕ ಆರೋಗ್ಯ ಸೇವೆ ಮುಂತಾದ ಸೇವೆಗಳು ಸಮುದಾಯದ ಕಟ್ಟಕಡೆಯ ಜನರಿಗೂ ಲಭಿಸುವಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಪಾತ್ರ ಮಹತ್ತರವಾಗಿದ್ದು, ಮಕ್ಕಳಲ್ಲಿನ ಸಾಧಾರಣ (ಮಾಡರೇಟ್) ಹಾಗೂ ತೀವ್ರ (ಸೀವಿಯರ್) ಅಪೌಷ್ಠಿಕತೆಯನ್ನು ತ್ವರಿತವಾಗಿ ಗುರುತಿಸಿ ಅರ್ಹ ಮಕ್ಕಳನ್ನು ಪೌಷ್ಠಿಕ ಪುನಶ್ಛೇತನ ಕೇಂದ್ರಗಳಿಗೆ (ಎನ್.ಆರ್.ಸಿ) ನಿರ್ದೇಶಿಸಿ ಅಪೌಷ್ಠಿಕತೆಯನ್ನು ನಿವಾರಿಸಬೇಕು ಎಂದರು. ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಎಸ್ ಮಾತನಾಡಿ, ಮಕ್ಕಳಲ್ಲಿ ಅಪೌಷ್ಠಿಕತೆ ನಿವಾರಣೆಗಾಗಿ ಸಮತೋಲಿತ ಆಹಾರದ ಅಗತ್ಯವಿದೆ. ಪೌಷ್ಠಿಕತೆಯ ಏಳು ಅಂಶಗಳು ಕಾರ್ಬೋಹೈಡ್ರೇಟ್, ಪ್ರೋಟೀನ್, ಕೊಬ್ಬು, ವಿಟಮಿನ್, ಖನಿಜಗಳು, ಆಹಾರದ ಫೈಬರ್, ನೀರು ಇವುಗಳು ಸಮತೋಲಿತವಾಗಿ ದೇಹಕ್ಕೆ ಸೇರಿದರೆ ಉತ್ತಮ ಆರೋಗ್ಯವನ್ನು ಪಡೆಯಬಹುದು. ಈ ಅಂಶವನ್ನು ಸಮುದಾಯದ ಜನರಿಗೆ ಮನವರಿಕೆ ಮಾಡಬೇಕು ಎಂದರು.

ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೋಟ ಸಿ.ಹೆಚ್.ಸಿ ಆಡಳಿತ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ.ಮಾಧವ ಪೈ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ವಿಜಯಬಾಯಿ, ಚಂದ್ರಕಲಾ ಹಾಗೂ ಭಾಗ್ಯಲಕ್ಷ್ಮಿ, ಕುಂದಾಪುರ ಎನ್.ಆರ್.ಸಿ ಡಯಟ್ ಕೌನ್ಸಿಲರ್ ಗುರುದೇವ ವಿ.ಕುಮಾರ್ ತರಬೇತಿ ನೀಡಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಎಸ್., ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್.ಜೆ. ಕಡ್ಡಿಪುಡಿ, ಆರ್.ಸಿ.ಹೆಚ್ ಡಿ.ಪಿ.ಸಿ ಸುಧೀಂದ್ರ, ಪ್ರತಿಮಾ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!