Wednesday, October 23, 2024
Wednesday, October 23, 2024

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ: ಸುವರ್ಣ ಮಹೋತ್ಸವ

ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ: ಸುವರ್ಣ ಮಹೋತ್ಸವ

Date:

ಕೋಟ, ಅ.23: ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಸುವರ್ಣ ಮಹೋತ್ಸವ ಕಾರ್ಯಕ್ರಮ ಸಾಲಿಗ್ರಾಮದ ಸಂಘದ ವಠಾರದಲ್ಲಿ ಜರಗಿತು. ಸಂಘದ ವಿಸ್ತ್ರತ ಕಟ್ಟಡವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಅಧ್ಯಕ್ಷ ಡಾ.ಕೆ ಎಸ್ ಕಾರಂತ ಉದ್ಘಾಟಿಸಿದರು. ದ.ಕ. ಸಹಕಾರಿ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಜಯರಾಮ ರೈ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ ಹಾಲು ಸಹಕಾರಿ ಉತ್ಪಾದಕರ ಒಕ್ಕೂಟದ ಮಾಜಿ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಗೋ ಪೂಜೆ ನೆರವೇರಿಸಿದರು. ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಗಾಣಿಗ ಅಧ್ಯಕ್ಷತೆ ವಹಿಸಿದ್ದರು ಹೆಚ್ಚು ಹಾಲು ಹಾಕಿದ ಸದಸ್ಯರಾದ ರಾಘವೇಂದ್ರ (ರಘು) ಮಧ್ಯಸ್ಥ, ಬಲರಾಮ ನಕ್ಷತ್ರಿ, ರಾಜು ದೇವಾಡಿಗ ಅವರನ್ನು ಬಹುಮಾನ ನೀಡಿ ಗೌರವಿಸಲಾಯಿತು. ಒಕ್ಕೂಟದ ಅಧಿಕಾರಿಗಳಾದ ಡಾ. ಅನಿಲ್ ಕುಮಾರ್ ಶೆಟ್ಟಿ, ಒಕ್ಕೂಟದ ವಿಸ್ತರಣಾಧಿಕಾರಿ ಸರಸ್ವತಿ, ಸುಜಾತ ಬಾಯರಿ ಇವರುಗಳನ್ನು ಸನ್ಮಾನಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರಾದ ಶ್ರೀಕಾಂತ ಐತಾಳ, ಪಿ ನರಸಿಂಹ ಹೇರ್ಳೆ, ಶಂಕರನಾರಾಯಣ ಹೊಳ್ಳ, ಸಂಘದ ಹಾಲಿ ಅಧ್ಯಕ್ಷ ಗಣೇಶ ಗಾಣಿಗ, ಒಕ್ಕೂಟದ ಸಹಾಯಕ ವ್ಯವಸ್ಥಾಪಕ ಡಾ. ನಿಜಾಮ್ ಪಾಟೀಲ್ ಗುಣಿಗಾರ್, ಸಂಘದ ಮಾಜಿ ಮುಖ್ಯಕಾರ್ಯನಿರ್ವಾಹಕರಾದ ಶ್ರೀನಿವಾಸ ಹೇರ್ಳೇ, ಶ್ರೀನಿವಾಸ ಐತಾಳ, ಸೂರ್ಯನಾರಾಯಣ ಹೊಳ್ಳ, ಪ್ರಸ್ತುತ ಮುಖ್ಯಕಾರ್ಯನಿರ್ವಹಣಾಧಿಕಾರಿ ಜ್ಯೋತಿ ಸುರೇಶ ನಾಯರಿ, ಮಾಜಿ ಕಾರ್ಯದರ್ಶಿಗಳಾದ ಶಂಕರನಾರಾಯಣ ಐತಾಳ, ನಾಗರಾಜ ಐತಾಳ, ಗಾಂಧಿ ಐತಾಳ್, ಶಕುಂತಳ, ಸ್ಥಾಪಕ ಕಾರ್ಯದರ್ಶಿ ಪಿ.ವಿ ಶ್ರೀನಿವಾಸ ಐತಾಳ್, ವಿವಿಧ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರನ್ನು ಸೇರಿದಂತೆ ಮಾಜಿ ನಿರ್ದೇಶಕರಗಳನ್ನು ಗುರುತಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ರವಿರಾಜ ಹಗ್ಡೆ, ಒಕ್ಕೂಟದ ಮಾಜಿ ಅಧ್ಯಕ್ಷ ಜಗದೀಶ್ ಕಾರಂತ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ನರಸಿಂಹ ಕಾಮತ್, ಎಮ್ ಸುಧಾಕರ ಶೆಟ್ಟಿ, ಸ್ಮಿತಾ ಆರ್ ಶೆಟ್ಟಿ, ಬೋಳ ಸದಾಶಿವ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ, ದ.ಕ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಮಾಜಿ ಅಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ, ದ.ಕ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಮಾಜಿ ನಿರ್ದೇಶಕಿ ಜಾನಕಿ ಹಂದೆ, ಅಘೋರೇಶ್ವರ ದೇಗುಲ ಕಾರ್ತಟ್ಟು ಇದರ ಮೊಕ್ತೇಸರ ಚಂದ್ರಶೇಖರ ಕಾರಂತ ಉಪಸ್ಥಿತರಿದ್ದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿ, ಚಂಡೆಯ ನಾದದೊಂದಿಗೆ ಮೆರವಣಿಗೆಯ ಮೂಲಕ ಅತಿಥಿಗಳನ್ನು ಸಂಘಕ್ಕೆ ಕರೆತೆರಲಾಯಿತು. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜ್ಯೋತಿ ಸುರೇಶ ನಾಯರಿ ವರದಿ ವಾಚಿಸಿದರು. ಸಾಲಿಗ್ರಾಮ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಶ್ರೀನಿವಾಸ ಸೋಮಯಾಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಂಘದ ನಿರ್ದೇಶಕ ಸುಬ್ರಾಯ ಉರಾಳ ಸ್ವಾಗತಿಸಿ, ಸುಜಾತ ಬಾಯರಿ ನಿರೂಪಿದರು .ಸಂಘದ ಉಪಾಧ್ಯಕ್ಷ ರಮೇಶ ಹಂದೆ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗ್ಲಿಸ್ಟನ್ ವೇದಿಕೆ ಉದ್ಘಾಟನೆ

ವಿದ್ಯಾಗಿರಿ, ಅ.23: ನಾವೀನ್ಯತೆಯು ಜಗತ್ತಿಗೆ ಹೊಸ ವಿಷಯಗಳನ್ನು ಪರಿಚಯಿಸುತ್ತದೆ. ಈಗಾಗಲೇ ಅಸ್ತಿತ್ವದಲ್ಲಿರುವ...

ಐಎಂಎ ಉಡುಪಿ ಕರಾವಳಿ ಪದಗ್ರಹಣ

ಉಡುಪಿ, ಅ.23: ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಉಡುಪಿ ಕರಾವಳಿಯ ಪದಗ್ರಹಣ ಸಮಾರಂಭ...

ಸಂಜಿತ್ ಎಂ ದೇವಾಡಿಗ ಸಾಕ್ಸೋಫೋನ್ ವಾದನ ಸೇವೆ

ಗಂಗೊಳ್ಳಿ, ಅ.23: ಗಂಗೊಳ್ಳಿಯ ಸೇವಾ ಸಂಘ (ರಿ) ಸಾರ್ವಜನಿಕ ಶ್ರೀ ಶಾರದೋತ್ಸವ...

ಕೆ.ಎಂ.ಸಿ ಮಣಿಪಾಲ: ಅನ್ನನಾಳದ ರಂಧ್ರದ ತೊಂದರೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ; ಇದು ದಕ್ಷಿಣ ಭಾರತದಲ್ಲಿ ಮೊದಲನೆಯದು

ಮಣಿಪಾಲ, ಅ.22: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅನ್ನನಾಳದ ರಂಧ್ರಕ್ಕೆ ಎಡೊಸ್ಕೋಪಿಕ್ ಚಿಕಿತ್ಸೆ...
error: Content is protected !!