Tuesday, February 25, 2025
Tuesday, February 25, 2025

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಉಡುಪಿ, ಅ.28: ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ 2020 ರಿಂದ 22 ರ ವರೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತವಾದ ಸ್ಥಳಗಳನ್ನು 20 ಬ್ಲಾಕ್ ಸ್ಪಾಟ್ ಗಳನ್ನಾಗಿ ಗುರುತಿಸಲಾಗಿದೆ. ಈ ಸ್ಥಳಗಳಲ್ಲಿ ಸುರಕ್ಷಿತಾ ನಿರ್ವಹಣೆ ಕಾಮಗಾರಿಗಳಾದ ಕಪ್ಪುಚುಕ್ಕೆ ಸ್ಥಳಗಳಲ್ಲಿ ಪಾದಚಾರಿಗಳ ಕ್ರಾಸಿಂಗ್ ಹಾಗೂ ಜೀಬ್ರಾ ಕ್ರಾಸಿಂಗ್, ಸೂಚನಾ ಫಲಕಗಳು, ಹೈಮಾಸ್ಟ್ ದ್ವೀಪಗಳು, ಬ್ಲಿಂರ‍್ಸ್ಗಳು, ರಸ್ತೆ ಬದಿಯಲ್ಲಿ ಮೆಟಲ್ ಕ್ರಾಸ್ ಬ್ಯಾರಿರ‍್ಸ್, ಹೆದ್ದಾರಿಯನ್ನು ಸಂಪರ್ಕಿಸುವ ರಸ್ತೆಗಳಿಗೆ ಹಂಪ್ಸ್, ಫೂಟ್‌ಓವರ್ ಬ್ರಿಡ್ಜ್, ಕೆಲವು ಸ್ಥಳಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗಲು ಒಳಚರಂಡಿ, ಎಂ.ಎಸ್ ರೈಲಿಂಗ್ಸ್, ಕಾಮಗಾರಿ ಕೈಗೊಳ್ಳಲು ಅವಶ್ಯಕತೆಗಳಿದ್ದು, ಇವುಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ವಾಹನ ಸವಾರರು ಸಾರ್ವಜನಿಕ ರಸ್ತೆಯಲ್ಲಿ ಚಲಿಸುವಾಗ ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದ್ದಲ್ಲಿ ಹಾಗೂ ವೇಗಮಿತಿಯೊಳಗೆ ಸುಗಮವಾಗಿ ಸಂಚರಿಸಿದ್ದಲ್ಲಿ ಮಾತ್ರ ಅಪಘಾತಗಳನ್ನು ತಪ್ಪಿಸಲು ಸಾಧ್ಯ. ಇದಕ್ಕೆ ಸಾರ್ವಜನಿಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ರಸ್ತೆಗಳಿಗೆ ಹಂಪ್ಸ್ಗಳನ್ನು ಅಳವಡಿಸುವಾಗ ವೈಜ್ಞಾನಿಕ ಮೆರ‍್ಸ್ಗಳನ್ನು ತೆಗೆದುಕೊಳ್ಳಬೇಕು ಎಂದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಜನರ ಹಾಗೂ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ತಾತ್ಕಾಲಿಕವಾಗಿ ಪೂರಕ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದರು. ಕುಂದಾಪುರ ಘಟಕದಿಂದ ಹೊರಡುವ ಗ್ರಾಮೀಣ ಸಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಬಾರದು. ಬಸ್ ನಿಲ್ದಾಣದಲ್ಲಿಯೇ ಪ್ರಯಾಣಿಕರನ್ನು ಇಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು. ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಅಗತ್ಯವಿರುವ ಸುರಕ್ಷತಾ ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಕ್ರಿಯಾ ಯೋಜನೆಯಡಿ ನೀಡಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವುದರೊಂದಿಗೆ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಲೋಕೋಪಯೋಗಿ ಇಲಾಖೆಯ ತಾಂತ್ರಿಕ ಸಹಾಯಕಿ ಜೆ.ಜಿ. ಶಾಂತಲಾ, ಪೌರಾಯುಕ್ತ ರಾಯಪ್ಪ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!