Tuesday, July 28, 2026
Tuesday, July 28, 2026

ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ: ಯಶ್ಪಾಲ್ ಸುವರ್ಣ

ಉಡುಪಿಯಲ್ಲಿ ವಕ್ಫ್ ಬೋರ್ಡ್ ನೊಟೀಸ್, ಪಹಣಿ ತಿದ್ದುಪಡಿ ಗಮನಕ್ಕೆ ಬಂದರೆ ತಕ್ಷಣ ಮಾಹಿತಿ ನೀಡಿ: ಯಶ್ಪಾಲ್ ಸುವರ್ಣ

Date:

ಉಡುಪಿ, ನ.3: ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ವಕ್ಫ್‌ ಬೋರ್ಡ್ ನೋಟೀಸ್ ನೀಡಿ ಗೊಂದಲ ಸೃಷ್ಟಿಯಾಗಿದ್ದು, ಹಲವರ ಪಹಣಿಯಲ್ಲಿ ತಿದ್ದುಪಡಿ ಮಾಡಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದು, ಉಡುಪಿ ಕ್ಷೇತ್ರದ ವ್ಯಾಪ್ತಿಯಲ್ಲಿ ಅಂತಹ ಸಮಸ್ಯೆ ಉಂಟಾದರೆ ತಕ್ಷಣ ಶಾಸಕರ ಕಚೇರಿಗೆ ಮಾಹಿತಿ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ವಕ್ಫ್ ಬೋರ್ಡ್ ಅವೈಜ್ಞಾನಿಕ ಕಾನೂನುಬಾಹಿರವಾಗಿ ನೋಟೀಸ್ ನೀಡಿ ಸಮಸ್ಯೆ ಸೃಷಿಸಿದೆ, ಸರ್ಕಾರ ತಕ್ಷಣ ಎಲ್ಲಾ ನೋಟೀಸ್ ಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಕರಾವಳಿ ಜಿಲ್ಲೆಯಾದ್ಯಂತ ವಿವಿಧ ದೇವಸ್ಥಾನಗಳ ಜಾತ್ರೆ ಉತ್ಸವ ಆರಂಭಗೊಳ್ಳಲಿದ್ದು, ಸಾರ್ವಜನಿಕರ ಭದ್ರತೆಯ ದೃಷ್ಟಿಯಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುವ ವ್ಯಕ್ತಿಗಳು ಸಂಬಂಧಿತ ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆಯಲ್ಲಿ ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಅನುಮತಿಯನ್ನು ಕಡ್ಡಾಯವಾಗಿ ಪಡೆಯುವಂತೆ ಸ್ಥಳೀಯಾಡಳಿತ ಸಂಸ್ಥೆಗಳು ನಿಯಮ ರೂಪಿಸುವ ಅಗತ್ಯತೆ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!