Monday, February 24, 2025
Monday, February 24, 2025

ಒಡಂಬಡಿಕೆ ಅವಧಿ ಮುಗಿದ ಕೃಷಿ ಯಂತ್ರಧಾರೆ ಕೇಂದ್ರಗಳ ನಿರ್ವಹಣೆಗೆ ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಒಡಂಬಡಿಕೆ ಅವಧಿ ಮುಗಿದ ಕೃಷಿ ಯಂತ್ರಧಾರೆ ಕೇಂದ್ರಗಳ ನಿರ್ವಹಣೆಗೆ ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Date:

ಉಡುಪಿ, ನ.7: ಜಿಲ್ಲೆಯಲ್ಲಿ 6 ವರ್ಷದ ಒಡಂಬಡಿಕೆ ಅವಧಿ ಮುಗಿದ ವಿ.ಎಸ್.ಟಿ ಟಿಲ್ರ‍್ಸ್ ಮತ್ತು ಟ್ಯಾಕ್ರ‍್ಸ್ ಬೆಂಗಳೂರು ಸಂಸ್ಥೆಯ ವತಿಯಿಂದ ಸ್ಥಾಪಿಸಲಾದ 4 ಹೋಬಳಿ ಮಟ್ಟದ ಕೃಷಿ ಯಂತ್ರಧಾರೆ ಕೇಂದ್ರಗಳಾದ ಕೋಟ, ಕಾಪು, ಕುಂದಾಪುರ ಹಾಗೂ ಕಾರ್ಕಳ ಕೇಂದ್ರಗಳನ್ನು ಆಸಕ್ತಿಯುಳ್ಳ ರೈತ ಉತ್ಪಾದಕ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಬೇಕಾಗಿರುತ್ತದೆ. ಆಸಕ್ತ ರೈತ ಉತ್ಪಾದಕ ಸಂಸ್ಥೆ ಹಾಗೂ ಇತರೆ ಸಂಸ್ಥೆಗಳು ಕಚೇರಿ ವೇಳೆಗಳಲ್ಲಿ ಕೇಂದ್ರಗಳಲ್ಲಿ ಲಭ್ಯವಿರುವ ಯಂತ್ರೋಪಕರಣಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಕೇಂದ್ರಗಳ ನಿರ್ವಹಣೆಗೆ ಆಸಕ್ತಿಯಿದ್ದಲ್ಲಿ ಅರ್ಜಿಗಳನ್ನು ನವೆಂಬರ್ 9 ರ ಒಳಗಾಗಿ ಕೃಷಿ ಇಲಾಖೆಯ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಮಟ್ಟದ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಪ್ರತಿ ಕೃಷಿ ಯಂತ್ರಧಾರೆ ಕೇಂದ್ರಕ್ಕೆ ರೈತ ಉತ್ಪಾದಕ ಸಂಸ್ಥೆಗಳು 50,000 ರೂ. ಹಾಗೂ ಇತರೆ ಸಂಸ್ಥೆಗಳು 1 ಲಕ್ಷ ರೂ. ಇ.ಎಂ.ಡಿ ಬಾಬ್ತನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಹೆಸರಿನಲ್ಲಿ 9 ವರ್ಷಗಳ ಅವಧಿಗೆ ಬ್ಯಾಂಕ್ ಗ್ಯಾರಂಟಿಯನ್ನು ನೀಡಬೇಕು. ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ವೀಕರಿಸಿದ ಸಂಸ್ಥೆಗಳು ಜಂಟಿ ಕೃಷಿ ನಿರ್ದೇಶಕರೊಂದಿಗೆ 9 ವರ್ಷಗಳ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಹಾಗೂ ಟೆಂಡರ್ ಷರತ್ತುಗಳಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!