Sunday, February 23, 2025
Sunday, February 23, 2025

ಮೆಸ್ಕಾಂ ವತಿಯಿಂದ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ

ಮೆಸ್ಕಾಂ ವತಿಯಿಂದ ಕಂಬ ಹತ್ತಿ ಇಳಿಯುವ ಉಚಿತ ತರಬೇತಿ

Date:

ಉಡುಪಿ, ನ.7: ಕ.ವಿ.ಪ್ರ.ನಿ.ನಿ ಯಿಂದ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಕಿರಿಯ ಪವರ್‌ಮೆನ್ ನೇಮಕಾತಿ ಸಂಬಂಧ ಸರಕಾರವು ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದರಿಂದ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಲುವಾಗಿ ಮೆಸ್ಕಾಂ ಉಡುಪಿ ವಿಭಾಗದ ವತಿಯಿಂದ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಕಂಬ ಹತ್ತಿ ಇಳಿಯುವ ಉಚಿತ ತರಬೇತಿಯನ್ನು ನವೆಂಬರ್ 14 ರಿಂದ 16 ರ ವರೆಗೆ ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು ಕ್ರೀಡಾಂಗಣದಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರ ವರೆಗೆ ಹಮ್ಮಿಕೊಳ್ಳಲಾಗಿದೆ. ಅಭ್ಯರ್ಥಿಗಳು ಭಾವಚಿತ್ರ ಇರುವ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿಯ ಪ್ರತಿ ಹಾಗೂ ಕಂಬ ಹತ್ತಿ ಇಳಿಯಲು ಸೂಕ್ತ ಉಡುಪಿನೊಂದಿಗೆ ಹಾಜರಾಗಬೇಕು. ನೇಮಕಾತಿಯು ಅಭ್ಯರ್ಥಿಯ ಅಂಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಅವಲಂಭಿತವಾಗಿದ್ದು, ತರಬೇತಿ ಅವಧಿಯಲ್ಲಿ ಯಾವುದೇ ಉಚಿತ ಸೌಲಭ್ಯಗಳು ಇರುವುದಿಲ್ಲ ಹಾಗೂ ತರಬೇತಿಯು ನೇಮಕಾತಿಯ ಭಾಗವಾಗಿರುವುದಿಲ್ಲ ಎಂದು ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!