Tuesday, July 28, 2026
Tuesday, July 28, 2026

ಗೋ ಗ್ರೀನ್ – 2.0 ಜಾಗೃತಿ ಜಾಥಾ

ಗೋ ಗ್ರೀನ್ – 2.0 ಜಾಗೃತಿ ಜಾಥಾ

Date:

ಕುಂದಾಪುರ, ನ.8: ಡಾ. ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ ಇಲ್ಲಿನ ಎನ್.ಸಿ.ಸಿ. ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಕುಂದಾಪುರದ ವಿವಿಧ ಭಾಗಗಳಾದ ಟೋಟಲ್ ಗ್ಯಾಸ್ ಬಂಕ್, ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು, ಜ್ಯೂನಿಯರ್ ಕಾಲೇಜು, ತಹಶೀಲ್ದಾರ ಕಛೇರಿ, ಪೊಲೀಸ್ ಸ್ಟೇಶನ್, ಸಂಚಾರಿ ಪೊಲೀಸ್ ಸ್ಟೇಶನ್, ಪುರಸಭೆ, ಸೈಂಟ್ ಮೇರಿಸ್ ಪದವಿಪೂರ್ವ
ಕಾಲೇಜು, ಬ್ಯಾರೀಸ್ ಗ್ರೂಪ್ ಆಫ್ ಇನ್ಸಿಟ್ಯೂಷನ್, ಕೋಡಿ ಇಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಪರಿಸರ ಸಂರಕ್ಷಣೆ ಮಹತ್ವವನ್ನು ತಿಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಹರೀಶ್ ಬಿ., ಶರತ್ ಕುಮಾರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!