Wednesday, July 29, 2026
Wednesday, July 29, 2026

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ: ವಿವಿಧ ಆಟೋಟ ಸ್ಪರ್ಧೆ

Date:

ಉಡುಪಿ, ನ.8: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2024 ಇದರ ಅಂಗವಾಗಿ ಬುಧವಾರ ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂ ದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯದಲ್ಲಿ ಶಾಲಾ ಮಕ್ಕಳಿಗಾಗಿ ನಡೆದ ವಿವಿಧ ಆಟೋಟ ಸ್ಪರ್ಧೆಗಳಿಗೆ ನಗರಸಭೆಯ ಅಧ್ಯಕ್ಷ ಪ್ರಭಾಕರ ಪೂಜಾರಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಶಾರದ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಸಂಗೀತ ಜಾನ್ಸನ್, ಬಾಲಕಿಯರ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಗಿರಿಜಾ ಹೆಗ್ಡೆ ಗಾವಂಕರ್, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸುಮಾರು 100 ಕ್ಕಿಂತ ಹೆಚ್ಚು ಮಕ್ಕಳು ಸ್ಪರ್ದೆಯಲ್ಲಿ ಭಾಗವಹಿಸಿದ್ದರು. ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಗ್ರಂಥಪಾಲಕಿ ರಂಜಿತ ಸಿ. ನಿರೂಪಿಸಿ, ಪ್ರಥಮ ದರ್ಜೆ ಸಹಾಯಕಿ ಶಕುಂತಳಾ ಕುಂದರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನೋಟೀಸ್

ಉಡುಪಿ, ಜು.29: ರಾಹುಲ್ ಗಾಂಧಿ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ ಅವರು...

ಹಡಪದ ಅಪ್ಪಣ್ಣ ರವರ ಚಿಂತನೆಗಳು ಮನುಕುಲದ ಉದ್ಧಾರಕ್ಕೆ ದಾರಿದೀಪ: ಮಂಜುನಾಥ ಪೂಜಾರಿ

ಉಡುಪಿ, ಜು.29: ಹನ್ನೆರಡನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ...

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...
error: Content is protected !!