Monday, February 24, 2025
Monday, February 24, 2025

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Date:

ಉಡುಪಿ, ನ.8: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 2300 ರೂ. ಹಾಗೂ ಭತ್ತ ಗ್ರೇಡ್ ಎ ವಿಧಕ್ಕೆ ದರ 2320 ರೂ. ರಂತೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಖರೀದಿ ಏಜೆನ್ಸಿಯವರು ರೈತರಿಂದ ಭತ್ತದ ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 15 ರಿಂದ ಡಿಸೆಂಬರ್ 31 ರವರೆಗೆ ರೈತರ ನೊಂದಣಿ ಕಾರ್ಯಗಳನ್ನು ಹಾಗೂ 2025 ರ ಜನವರಿ 1 ರಿಂದ ಮಾರ್ಚ್ 31 ರ ಅವಧಿಯೊಳಗೆ ರೈತರಿಂದ ಭತ್ತವನ್ನು ಖರೀದಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಉಡುಪಿ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು, ಕುಂದಾಪುರ ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮು ಹಾಗೂ ಕಾರ್ಕಳ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು ಇಲ್ಲಿ ಭತ್ತದ ನೊಂದಣಿ/ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡಿಸಿಕೊಂಡು ಮತ್ತು ಸೇರ್ಪಡಿಸಿಕೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರಕ್ಕೆ ಬಂದು ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!