Wednesday, July 29, 2026
Wednesday, July 29, 2026

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Date:

ಉಡುಪಿ, ನ.8: ಕೇಂದ್ರ ಸರಕಾರವು ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 2300 ರೂ. ಹಾಗೂ ಭತ್ತ ಗ್ರೇಡ್ ಎ ವಿಧಕ್ಕೆ ದರ 2320 ರೂ. ರಂತೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ. ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಖರೀದಿ ಏಜೆನ್ಸಿಯವರು ರೈತರಿಂದ ಭತ್ತದ ನೊಂದಣಿ ಪ್ರಕ್ರಿಯೆಯನ್ನು ನವೆಂಬರ್ 15 ರಿಂದ ಡಿಸೆಂಬರ್ 31 ರವರೆಗೆ ರೈತರ ನೊಂದಣಿ ಕಾರ್ಯಗಳನ್ನು ಹಾಗೂ 2025 ರ ಜನವರಿ 1 ರಿಂದ ಮಾರ್ಚ್ 31 ರ ಅವಧಿಯೊಳಗೆ ರೈತರಿಂದ ಭತ್ತವನ್ನು ಖರೀದಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು. ಉಡುಪಿ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು, ಕುಂದಾಪುರ ಕೋಟೇಶ್ವರದ ಕೆ.ಎಫ್.ಸಿ.ಎಸ್.ಸಿ ಗೋದಾಮು ಹಾಗೂ ಕಾರ್ಕಳ ಎ.ಪಿ.ಎಂ.ಸಿ ಯಾರ್ಡ್ನ ಕೆ.ಎಫ್.ಸಿ.ಎಸ್.ಸಿ ಗೋದಾಮು ಇಲ್ಲಿ ಭತ್ತದ ನೊಂದಣಿ/ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡಿಸಿಕೊಂಡು ಮತ್ತು ಸೇರ್ಪಡಿಸಿಕೊಂಡಿರುವ ಬಗ್ಗೆ ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರಕ್ಕೆ ಬಂದು ನೊಂದಣಿ ಮಾಡಿಸಿಕೊಳ್ಳಬಹುದಾಗಿದೆ. ರೈತರು ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಚಾತುರ್ಮಾಸ ಸಾಧನೆಗೆ ಶ್ರೇಷ್ಠ ಕಾಲ: ಭಂಡಾರಕೇರಿ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು

ಬಾರಕೂರು, ಜು.೨೯: ಶ್ರಾವಣದಿಂದ ಕಾರ್ತಿಕ ಮಾಸದವರೆಗಿನ ನಾಲ್ಕು ತಿಂಗಳ ಕಾಲ ಭಗವಂತ...

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...
error: Content is protected !!