Sunday, February 23, 2025
Sunday, February 23, 2025

ಕೊಡವೂರು: ಆರೋಗ್ಯ ತಪಾಸಣಾ ಶಿಬಿರ

ಕೊಡವೂರು: ಆರೋಗ್ಯ ತಪಾಸಣಾ ಶಿಬಿರ

Date:

ಕೊಡವೂರು, ನ.8: ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು, ಲಯನ್ಸ್ & ಲಿಯೋ ಕ್ಲಬ್, ಪರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಲ್ಪೆ, ಸಮುದಾಯ ವೈದ್ಯಕೀಯ ವಿಭಾಗ, ನರರೋಗ ವಿಭಾಗ, ಅಕ್ಯುಪೇಶನಲ್ ಥೆರಪಿ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಆರೋಗ್ಯ ಮಾಹಿತಿ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಕೆ.ಎಂ.ಸಿ. ಮಣಿಪಾಲದ ನರರೋಗ ತಜ್ಞರಾದ ಡಾ. ಅರವಿಂದ ಎನ್. ಪ್ರಭು ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಅಕ್ಯುಪೇಶನಲ್ ಥೆರಪಿ ವಿಭಾಗದ ಪ್ರಾಧ್ಯಾಪಕರಾದ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ, ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ದಿವ್ಯಾ ಪ್ರಭು, ಪರ್ಕಳ ಲಯನ್ಸ್ & ಲಿಯೋ ಕ್ಲಬ್ ನ ರಾಧಾಕೃಷ್ಣ ಮೆಂಡನ್, ದಿವ್ಯಾಂಗ ರಕ್ಷಣಾ ಸಮಿತಿ ಕಾರ್ಯದರ್ಶಿ ಜಯ ಪೂಜಾರಿ ಕಲ್ಮಾಡಿ ಉಪಸ್ಥಿತರಿದ್ದರು. ಸ್ಟ್ರೋಕ್ ಸಮಸ್ಯೆಯ ಬಗ್ಗೆ ಡಾ. ಅರವಿಂದ ಎನ್. ಪ್ರಭು ಹಾಗೂ ಡಾ. ಸೆಬಸ್ಟಿನ್ ಅನಿತಾ ಡಿಸೋಜಾ ಅವರು ಮಾಹಿತಿ ನೀಡಿದರು. ಅಕ್ಯುಪೇಶನಲ್ ಥೆರಪಿ ವಿಭಾಗದ ವಿದ್ಯಾರ್ಥಿಗಳಿಂದ ಸ್ಟ್ರೋಕ್ ನ ಕುರಿತು ಕಿರು ಪ್ರಹಸನ ನಡೆಯಿತು. ನಂತರ ಶಿಬಿರಕ್ಕೆ ಬಂದವರಿಗೆ ನರ ಸಂಬಂಧಿತ ಸಮಸ್ಯೆ ಹಾಗೂ ಇನ್ನಿತರ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾ. ದಲರಾಜ್, ಡಾ. ಜೆಲಿಟಾ, ಸಾಮಾಜಿಕ ಕಾರ್ಯಕರ್ತ ಮಹೇಶ್, ಅಕ್ಯುಪೇಶನ್ ವಿಭಾಗದ ಸದಿಚಾ ಕಾಮತ್, ಸಿ.ಹೆಚ್.ಓ. ಮೈತ್ರಿ, ಶುಶ್ರೂಷಕಿಯರಾದ ಸುರೇಖಾ & ಲವಿನಾ, ಸಿಬ್ಬಂದಿ ಸೃಜನ್ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!