Tuesday, July 28, 2026
Tuesday, July 28, 2026

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ

Date:

ಮಣಿಪಾಲ, ನ.8: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆಯನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ದಳ ನಾಯಕಿಯರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಕಬ್, ಬುಲ್ ಬುಲ್ ಸ್ಕೌಟ್ಸ್, ಗೈಡ್ಸ್ , ರೋವರ್, ರೇಂಜರ್ಸ್, ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾಧಿಕಾರಿಯವರು ಸ್ಕೌಟ್ಸ್ ಗೈಡ್ಸ್ ನಿಧಿಗೆ ದೇಣಿಗೆ ನೀಡುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ಪದಾಧಿಕಾರಿಯವರೆಲ್ಲರೂ ಅವರೊಂದಿಗೆ ಕೈಜೋಡಿಸಿದರು. ಇತರ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನರೇಂದ್ರ ಎಸ್ ಗಂಗೊಳ್ಳಿಗೆ ಕಾವ್ಯಶ್ರೀ ಪ್ರಶಸ್ತಿ

ಗಂಗೊಳ್ಳಿ, ಜು.27: ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನಹಡಗಲಿ ವತಿಯಿಂದ ಕೊಡಲ್ಪಡುವ...

ಕಾಮನ್‌ವೆಲ್ತ್ ಕ್ರೀಡಾಕೂಟ: ಮುಂದುವರಿದ ಭಾರತದ ಪದಕ ಬೇಟೆ

ಯು.ಬಿ.ಎನ್.ಡಿ., ಜು.27: ಗ್ಲಾಸ್ಗೋದಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವೇಟ್‌ಲಿಫ್ಟರ್ ಜ್ಞಾನೇಶ್ವರಿ...

ಸಂಸ್ಕೃತ ಪ್ರತಿಭಾ ಪುರಸ್ಕಾರ

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು...
error: Content is protected !!