Tuesday, February 25, 2025
Tuesday, February 25, 2025

ಕಲಾವಿದರನ್ನು ಗುರುತಿಸುವ ಕಾಯಕ ಶ್ಲಾಘನೀಯ: ಉದಯಕುಮಾರ್ ಶೆಟ್ಟಿ

ಕಲಾವಿದರನ್ನು ಗುರುತಿಸುವ ಕಾಯಕ ಶ್ಲಾಘನೀಯ: ಉದಯಕುಮಾರ್ ಶೆಟ್ಟಿ

Date:

ಕೋಟ, ನ.26: ಸಂಘಟನೆಗಳಿಂದ ಕಲಾರಾಧನೆ ಹಾಗೂ ಕಲಾವಿದರ ಗುರುತಿಸುವ ಕಾಯಕ ಅತ್ಯಂತ ಶ್ಲಾಘನೀಯ ಎಂದು ಉದ್ಯಮಿ ಕಿದಿಯೂರು ಉದಯಕುಮಾರ್ ಶೆಟ್ಟಿ ಹೇಳಿದರು. ಅಘೋರೇಶ್ವರ ದೇಗುಲದ ವಠಾರದಲ್ಲಿ ಅಘೋರೇಶ್ವರ ಕಲಾರಂಗ ಕಾರ್ತಟ್ಟು ಚಿತ್ರಪಾಡಿ ಇವರ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘ ಸಂಸ್ಥೆಗಳು ಸಮಾಜಮುಖಿ ಕೆಲಸ ನಿರ್ವಹಿಸುವುದರ ಜತೆಗೆ ಭಾಷಾಭಿಮಾನ ಹೆಚ್ಚಿಸುವ ಕಾರ್ಯಕ್ರಮಗಳು ನಿತ್ಯನಿರಂತರವಾಗಿ ನಡೆಯಲಿ ಎಂದರು. ಇದೇ ವೇಳೆ ಅಘೋರೇಶ್ವರ ರಾಜ್ಯೋತ್ಸವ ಪ್ರಶಸ್ತಿಯನ್ನು ಹಿರಿಯ ಯಕ್ಷಕಲಾವಿದ ಹಳ್ಳಾಡಿ ಕೃಷ್ಣ ನಾಯ್ಕ್ ಇವರಿಗೆ ಯಕ್ಷ ಚಿಂತಕ ಪ್ರೊ. ಎಸ್.ವಿ ಉದಯ್ ಕುಮಾರ್ ಶೆಟ್ಟಿ ಪ್ರದಾನ ಮಾಡಿದರು. ಅಧ್ಯಕ್ಷತೆಯನ್ನು ಅಘೋರೇಶ್ವರ ಕಲಾರಂಗದ ಅಧ್ಯಕ್ಷ ಉಮೇಶ್ ನಾಯರಿ ವಹಿಸಿದ್ದರು. ಕ್ರೀಡಾ ಸಾಧಕಿ ತೃಪ್ತಿ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಾರಾನಾಥ ಹೊಳ್ಳ ಇವರನ್ನು ಅಭಿನಂದಿಸಲಾಯಿತು.

ಮುಖ್ಯ ಅಭ್ಯಾಗತರಾಗಿ ಅಘೋರೇಶ್ವರ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ್ ಕಾರಂತ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜಗದೀಶ್ ಶೆಟ್ಟಿ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಕುಂದಾಪುರ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ, ರೋಟರಿ ಕ್ಲಬ್ ಕೋಟ ಸಿಟಿ ಅಧ್ಯಕ್ಷ ಅನಿಲ್ ಸುವರ್ಣ, ರೋಟರಿ ವಲಯ ಸೇನಾನಿ ನಿತ್ಯಾನಂದ ನಾಯರಿ, ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ, ಗಾಣಿಗ ಯುವ ಸಂಘಟನೆ ಕೋಟ ಅಧ್ಯಕ್ಷ ಗಿರೀಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಪ್ರಭಾಕರ ನಾಯರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನೆಯ ಪ್ರಮುಖರಾದ ವಿಶ್ವನಾಥ್ ಗಾಣಿಗ ಸ್ವಾಗತಿಸಿ, ಸನ್ಮಾನಪತ್ರವನ್ನು ಸದಸ್ಯ ರವಿ ಬನ್ನಾಡಿ ವಾಚಿಸಿದರು. ಕಾರ್ಯಕ್ರಮವನ್ನು ನಾಗೇಂದ್ರ ಆಚಾರ್ ನಿರೂಪಿಸಿದರು. ಕಲಾರಂಗದ ಕೋಶಾಧಿಕಾರಿ ರೇವತಿ ಎಸ್ ನಾಯರಿ ವಂದಿಸಿದರು. ರಾಧಕೃಷ್ಣ ಬ್ರಹ್ಮಾವರ, ನವೀನ್ ನಾಯರಿ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!