Wednesday, February 26, 2025
Wednesday, February 26, 2025

ಯಕ್ಷಾರಾಧನೆ ರಂಗದೋಕುಳಿ

ಯಕ್ಷಾರಾಧನೆ ರಂಗದೋಕುಳಿ

Date:

ಕೋಟ, ನ.27: ಒಂದು ಕಾಲದಲ್ಲಿ ಯಕ್ಷಗಾನದ ಮಹತ್ವ ಅರಿತವರು ಬಹಳ ವಿರಳವಾಗಿದ್ದರು, ಆದರೆ ನಂತರದ ದಿನಗಳಲ್ಲಿ ಶಿವರಾಮ ಕಾರಂತರ ಮೂಲಕ ಯಕ್ಷಗಾನ ವಿಶ್ವಗಾನವಾಗಿ ಪಸರಿಸಿಕೊಂಡಿದೆ ಎಂದು ನ್ಯೂ ಕರ್ನಾಟಕ ಬಿಲ್ಡಸ್೯ ಮುಖ್ಯಸ್ಥ ಚೇತನ್ ಶೆಟ್ಟಿ ಹೇಳಿದರು. ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲ ವಠಾರದಲ್ಲಿ ಕೋಟ ಯಕ್ಷಸೌರಭ ಶ್ರೀ ಹಿರೇಮಹಾಲಿಂಗೇಶ್ವರ ಕಲಾರಂಗ ವತಿಯಿಂದ ಕಾರ್ತಿಕ ಮಾಸದ ಯಕ್ಷಾರಾಧನೆ ರಂಗದೋಕುಳಿ ಯಕ್ಷದೀಪಾವಳಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಐರೋಡಿ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದ ಧರ್ಮದರ್ಶಿ ಸುಬ್ರಹ್ಮಣ್ಯ ಮಧ್ಯಸ್ಥ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅಭ್ಯಾಗತರಾಗಿ ನ್ಯಾಯವಾದಿ ಟಿ.ಮಂಜುನಾಥ ಗಿಳಿಯಾರು ಮಾತನಾಡಿದರು. ಯಕ್ಷಗಾನದ ಉಳಿವಿನಲ್ಲಿ ಮೇಳಗಳ ಪಾತ್ರ ಎಷ್ಟಿದಯೋ ಅದೇ ರೀತಿ ಹವ್ಯಾಸಿ ಕಲಾವಿದರ ಕೊಡುಗೆ ಕೂಡಾ ಅಷ್ಟೇ ಪ್ರಮಾಣದಲ್ಲಿದೆ. ಈ ದಿಸೆಯಲ್ಲಿ ವಿಶ್ವದಾದ್ಯಂತ ಯಕ್ಷಕಲಾರಾಧನೆ ಜನಮನ್ನಣೆ ದೊರೆಯುತ್ತಿದೆ. ಅದೇ ರೀತಿ ಯಕ್ಷಸೌರಭ ಯಕ್ಷಗಾನದ ಮೂಲಕ ಕಲಾರಸಿಕರ ಮನಸೂರೆಗೊಳಿಸಿದೆ ಎಂದು ತಮ್ಮ ಅಭಿಮತ ವ್ಯಕ್ತಪಡಿಸಿದರು. ಅಧ್ಯಕ್ಷತೆಯನ್ನು ಯಕ್ಷಸೌರಭ ಹಿರೇಮಹಾಲಿಂಗೇಶ್ವರ ಕಲಾರಂಗದ ಅಧ್ಯಕ್ಷ ರಾಘವೇಂದ್ರ ಕರ್ಕೇರ ಕೋಡಿ ವಹಿಸಿದ್ದರು. ಅಭ್ಯಾಗತರಾಗಿ ಕೋಟ ಅಮೃತೇಶ್ವರಿ ದೇಗುಲದ ಮಾಜಿ ಟ್ರಸ್ಟಿ ಎಂ ಸುಬ್ರಾಯ ಆಚಾರ್, ದೇವಾಡಿಗರ ಸಂಘ ಕೋಟ ಸಾಲಿಗ್ರಾಮ ಅಧ್ಯಕ್ಷ ನರಸಿಂಹ ದೇವಾಡಿಗ, ಕಲಾರಂಗದ ಕಾರ್ಯಾಧ್ಯಕ್ಷ ಹರೀಷ್ ದೇವಾಡಿಗ ಉಪಸ್ಥಿತರಿದ್ದರು. ಸಂಘದ ಸ್ಥಾಪಾಕಾಧ್ಯಕ್ಷ ಹರೀಶ್ ಭಂಡಾರಿ ಸ್ವಾಗತಿಸಿ, ಕಾರ್ಯದರ್ಶಿ ಶ್ರೀನಾಥ್ ಉರಾಳ್ ವಂದಿಸಿದರು. ಸಂಘದ ಸದಸ್ಯ ರಾಜೇಶ್ ಕರ್ಕೇರ ಕೋಡಿ ನಿರೂಪಿಸಿದರು. ಕಾರ್ಯಕ್ರಮದ ನಂತರ ಚಕ್ರವೂಹ್ಯ ಪೌರಾಣಿಕ ಯಕ್ಷಪ್ರಸಂಗ ಪ್ರದರ್ಶನಗೊಂಡಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೊಂಬೆಳಕು ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪ.ಪಂ.ಗೆ ನಾಲ್ಕು ಬಹುಮಾನ

ಉಡುಪಿ, ಫೆ.25: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ಪಂಚಾಯತ್ ರಾಜ್...

ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಫೆ.25: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡ / ನಿವೇಶನಗಳನ್ನು...

ವೈದ್ಯಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಫೆ.25: ಆರೋಗ್ಯ ಇಲಾಖೆಯ ವತಿಯಿಂದ ಜಿಲ್ಲೆಯ ಕಾರ್ಕಳ ಸಾರ್ವಜನಿಕ ಆಸ್ಪತ್ರೆಯಲ್ಲಿ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಣ್ಣರು ಶ್ರೀಕೃಷ್ಣನ ಫ್ರೆಂಡ್ಸ್: ಪುತ್ತಿಗೆ ಶ್ರೀ

ಉಡುಪಿ, ಫೆ.25: ಶ್ರೀಕೃಷ್ಣನಿಗೆ ಮಕ್ಕಳು ಎಂದರೆ ಬಹಳ ಪ್ರೀತಿ.​ ಕೃಷ್ಣನು ತನ್ನ...
error: Content is protected !!