Tuesday, February 25, 2025
Tuesday, February 25, 2025

ಅಂಚೆ ಜನಸಂಪರ್ಕ ಅಭಿಯಾನ

ಅಂಚೆ ಜನಸಂಪರ್ಕ ಅಭಿಯಾನ

Date:

ಉಡುಪಿ, ನ.28: ಭಾರತೀಯ ಅಂಚೆ ಇಲಾಖೆಯ ಉಡುಪಿ ವಿಭಾಗದ ವತಿಯಿಂದ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಇವರ ಸಹಯೋಗದಲ್ಲಿ ಉಡುಪಿಯ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಡಾಕ್-ಸೇವಾ; ಜನ್-ಸೇವಾ-ಅಂಚೆ ಜನ ಸಂಪರ್ಕ ಅಭಿಯಾನ’ ನಡೆಯಿತು. ಅಭಿಯಾನವನ್ನು ದೀಪ ಬೆಳಗಿಸಿ ಉಧ್ಘಾಟಿಸಿ, ಚಾಲನೆ ನೀಡಿದ ಸಹಕಾರ ರತ್ನ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಅಂಚೆ ಆಧಾರ್ ಕ್ಯಾಂಪ್ ನಲ್ಲಿ ಆಧಾರ್ ಕಾರ್ಡ್ ಮಾಡಿಸಿದ ಪ್ರಥಮ ನಾಗರಿಕ ತಾನಾಗಿದ್ದು, ಎಲ್ಲಾ ಕಡೆಗಳಲ್ಲಿ ಈ ರೀತಿಯ ಅಭಿಯಾನಗಳನ್ನು ನಡೆಸಿ, ಜನರಿಗೆ ನೆರವಾಗುತ್ತಿರುವ ಉಡುಪಿ ಅಂಚೆ ವಿಭಾಗವನ್ನು ಶ್ಲಾಘಿಸಿದರು. ಅಭಿಯಾನದ ನೇತೃತ್ವ ವಹಿಸಿದ್ದ ಉಡುಪಿ ದಕ್ಷಿಣ ಉಪ ಅಂಚೆ ವಿಭಾಗದ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ ಪ್ರಸ್ತಾವನೆಗೈದು, ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು. ಅಂಚೆ ಅಧೀಕ್ಷಕ ರಮೇಶ್ ಪ್ರಭು ಉಪಸ್ಥಿತರಿದ್ದು, ಆಯೋಜಕರ ಇಂತಹ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರಲ್ಲದೇ, ಸ್ಥಳಾವಕಾಶಕ್ಕಾಗಿ ಶಾಲಾ ಆಡಳಿತ ಮಂಡಳಿಗೆ ಧನ್ಯವಾದ ಅರ್ಪಿಸಿದರು. ನೂರಾರು ಗ್ರಾಹಕರು-ಪೋಷಕರು- ಶಾಲಾ ಮಕ್ಕಳು ಒಂದೇ ಸೂರಿನಡಿ ಹಲವಾರು ಅಂಚೆ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!