Tuesday, February 25, 2025
Tuesday, February 25, 2025

ರೈತ ಸಮುದಾಯಕ್ಕೆ ಪ್ರೋತ್ಸಾಹ ಅತ್ಯಗತ್ಯ: ಮಂಜುನಾಥ್ ಗಿಳಿಯಾರ್

ರೈತ ಸಮುದಾಯಕ್ಕೆ ಪ್ರೋತ್ಸಾಹ ಅತ್ಯಗತ್ಯ: ಮಂಜುನಾಥ್ ಗಿಳಿಯಾರ್

Date:

ಕೋಟ, ನ.28: ರೈತ ಕಾಯಕವಿದ್ದರೆ ಸಮಾಜದಲ್ಲಿ ಬದುಕು ಜೀವಂತ. ಅಂತಹ ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ಸಲ್ಲ ಎಂದು ರೈತಧ್ವನಿ ಸಂಘದ ಹೋರಾಟಗಾರ ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರು ಅಭಿಪ್ರಾಯಪಟ್ಟರು. ಬುಧವಾರ ಕೋಟದ ಮಣೂರು ಪಡುಕರೆಯ ರವೀಂದ್ರ ಶೆಟ್ಟಿ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇವರ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ, ವಿಪ್ರ ಮಹಿಳಾ ಸಾಲಿಗ್ರಾಮ ವಲಯ, ಜೆಸಿಐ ಸೀನಿಯರ್ ಲಿಜನ್ ಕೋಟ ಇವರುಗಳ ಸಹಯೋಗದೊಂದಿಗೆ ರೈತರೆಡೆಗೆ ನಮ್ಮ ನಡಿಗೆ 41ನೇ ಸರಣಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ.ಕೃಷ್ಣ ಕಾಂಚನ್ ಮಾತನಾಡಿ, ಪರಿಸರದ ಹಾಗೂ ಕೃಷಿ ಭೂಮಿಯ ಮೇಲೆ ಪ್ಲಾಸ್ಟಿಕ್ ಅತಿಯಾಗಿ ವಿಜೃಂಭಿಸುತ್ತಿದ್ದು, ಇದು ಪ್ರತಿಯೊಂದು ಜೀವಿಗೂ ಮಾರಕವಾಗಿದೆ. ಹೊಳೆ ತೊರೆಗಳಲ್ಲೂ ಪ್ಲಾಸ್ಟಿಕ್ ಮಯವಾಗಿದೆ, ಇದರಿಂದ ಮನುಷ್ಯ ಜೀವಕ್ಕೆ ಸಂಚಕಾರಬಂದೊದಗುತ್ತಿದೆ. ಈಗಲೇ ಜಾಗೃತರಾಗುವುದು ಒಳಿತು ಎಂದರು. ಸಾಧಕ ಕೃಷಿಕ ರವೀಂದ್ರ ಶೆಟ್ಟಿ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ವಿಶೇಷವಾಗಿ ಗೋಪೂಜೆ ನೆರವೇರಿಸಿ, ಗಿಡ ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಎಂ.ಭಾಸ್ಕರ್ ಶೆಟ್ಟಿ ಸನ್ಮಾನಿತರ ಬಗ್ಗೆ ಪರಿಚಯಿಸಿದರು. ಕೋಟದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಸುಪ್ರಭಾ ಅವರು, ಇಲಾಖೆಯಿಂದ ರೈತರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಮುಖ್ಯ ಅಭ್ಯಾಗತರಾಗಿ ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ, ಗೆಳೆಯರ ಬಳಗ ಕಾರ್ಕಡ ಸದಸ್ಯ ಶೇಖರ್ ಕಾರ್ಕಡ, ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚವರ್ಣ ಸದಸ್ಯ ಸಂತೋಷ್ ಕುಮಾರ್ ಕೋಟ ನಿರೂಪಿಸಿ, ಸದಸ್ಯ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...

ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಉಡುಪಿ, ಫೆ.24: ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ರೂ. 30 ಲಕ್ಷ...

ಪಂಚವರ್ಣ ಸ್ವಚ್ಛತಾ ಕಾರ್ಯ

ಕೋಟ, ಫೆ.24: ಕೋಟದ ಹರ್ತಟ್ಟು ಕಲ್ಲಟ್ಟು ಶ್ರೀ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ...
error: Content is protected !!