Monday, February 24, 2025
Monday, February 24, 2025

ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ: ಡಾ. ಗಣನಾಥ ಎಕ್ಕಾರಿಗೆ ಸನ್ಮಾನ

ಕೊಂಕಣ ರೈಲ್ವೆ ಕನ್ನಡ ಅಭಿಮಾನ ಬಳಗ: ಡಾ. ಗಣನಾಥ ಎಕ್ಕಾರಿಗೆ ಸನ್ಮಾನ

Date:

ಉಡುಪಿ, ನ.30: ಗೋವಾದ ಕೊಂಕಣ ರೈಲ್ವೆ ಕನ್ನಡ ಅಭಿಮಾನಿ ಬಳಗದಿಂದ ಗೋವಾದ ಮಡಗಾಂವಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಶಿಕ್ಷಣ, ಜಾನಪದ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಜಾನಪದ ವಿದ್ವಾಂಸ, ಚಿಂತಕ ಭಾರತೀಯ ರೆಡ್‌ಕ್ರಾಸ್ ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಅವರನ್ನು ಸನ್ಮಾನಿಸಲಾಯಿತು. ಗೋವಾ ಕೊಂಕಣ ರೈಲ್ವೆ ಅಭಿಮಾನ ಬಳಗ ಕೊಂಕಣ ರೈಲ್ವೆ ಕಮರ್ಷಿಯಲ್ ಸೂಪರ್‌ವೈಸರ್ ನಾಗಪತಿ ಹೆಗ್ಡೆ ಮತ್ತು ಬಳಗದ ಅಧ್ಯಕ್ಷ ಸುಭಾಶ್ವಂದ್ರ ಬಿ. ಶೆಟ್ಟಿ ಸನ್ಮಾನಿಸಿದರು. ಬಳಗದ ಗೌರವ ಸಲಹೆಗಾರ ದಿನೇಶ್ ಭಟ್ ಗೋಪಿ, ಕಾರ್ಯದರ್ಶಿ ರವಿಕುಮಾರ್, ಖಚಾಂಚಿ ಶ್ರೀಧರ್ ಬಳ್ಳಾರಿ ಉಪಸ್ಥಿತರಿದ್ದರು. ಬಳಿಕ ಡಾ. ಎಕ್ಕಾರರು ಕನ್ನಡ ನಾಡು ನುಡಿಯ ಅನನ್ಯತೆ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!