Monday, February 24, 2025
Monday, February 24, 2025

ಅಮೃತೇಶ್ವರಿ ದೇವಳ: ದೀಪೋತ್ಸವ ಸಂಪನ್ನ

ಅಮೃತೇಶ್ವರಿ ದೇವಳ: ದೀಪೋತ್ಸವ ಸಂಪನ್ನ

Date:

ಕೋಟ, ಡಿ.1: ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲದ ವಾರ್ಷಿಕ ದೀಪೋತ್ಸವ ಕಾರ್ಯಕ್ರಮ ಶುಕ್ರವಾರ ಸಂಪನ್ನಗೊಂಡಿತು. ದೇಗುಲದಿಂದ ರಾಷ್ಟ್ರೀಯ ಹೆದ್ದಾರಿಯವರೆಗೆ ಹಣತೆ ಸಾಲು ಇರಿಸಲು ಸಕಲ ವ್ಯವಸ್ಥೆಯನ್ನು ದೇಗುಲದ ಆಡಳಿತ ಮಂಡಳಿ ಕಲ್ಪಿಸಿತು. ದೇಗುಲದಲ್ಲಿ ಪ್ರಧಾನ ಅರ್ಚಕ ಸುಬ್ರಾಯ ಜೋಗಿ ವಿಶೇಷ ಆರತಿ ಬೆಳಗಿ ದೇಗುಲದ ಅಧ್ಯಕ್ಷರಾದ ಆನಂದ್ ಸಿ ಕುಂದರ್ ಹಣತೆಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ರಸ್ತೆಯುದ್ದಕ್ಕೂ ರಂಗೋಲಿ ಅರಳಿಸಿದ ಭಕ್ತರು ಸಾಗರೋಪಾದಿಯಲ್ಲಿ ಇರಿಸಿದ ಹಣತೆಗೆ ಭಕ್ತಿಭಾವದಲ್ಲಿ ಜ್ಯೋತಿ ಬೆಳೆಗಿಸಿದರು.

ವಿಶೇಷ ಹೂವಿನ ಪೂಜೆ, ಮಹಾಮಂಗಳಾರತಿ ನಡೆಯಿತು. ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಆನಂದ್ ಸಿ ಕುಂದರ್, ಸಮಿತಿಯ ಸದಸ್ಯರಾದ ಎಂ ಶಿವ ಪೂಜಾರಿ, ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಸುಧಾ ಎ ಪೂಜಾರಿ, ಜ್ಯೋತಿ ಡಿ ಕಾಂಚನ್, ಚಂದ್ರ ಆಚಾರ್, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!