Sunday, February 23, 2025
Sunday, February 23, 2025

ಸ್ವಚ್ಛತೆಯ ಬಗ್ಗೆ ಸ್ಥಳೀಯರಿಗೆ ಅರಿವಿರಬೇಕು: ಅಣ್ಣಪ್ಪ ಕುಂದರ್

ಸ್ವಚ್ಛತೆಯ ಬಗ್ಗೆ ಸ್ಥಳೀಯರಿಗೆ ಅರಿವಿರಬೇಕು: ಅಣ್ಣಪ್ಪ ಕುಂದರ್

Date:

ಕೋಟ, ಡಿ.9: ಪರಿಸರ ಸ್ವಚ್ಛತೆಯ ಬಗ್ಗೆ ಸ್ಥಳೀಯರು ಜಾಗೃತಿ ಹೊಂದಬೇಕು, ಆಗಲೇ ಪರಿಸರ ಶುಚಿಯಾಗಿಡಲು ಸಾಧ್ಯ ಎಂದು ಕೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಣ್ಣಪ್ಪ ಕುಂದರ್ ಅಭಿಪ್ರಾಯಪಟ್ಟರು. ಭಾನುವಾರ ಕೋಡಿ ಹೊಸಬೇಂಗ್ರೆ ಬೀಚ್ ಪ್ರದೇಶದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ೨೩೩ನೇ ಪರಿಸರಸ್ನೇಹಿ ಅಭಿಯಾನದ ಅಂಗವಾಗಿ ಕೋಡಿ ಗ್ರಾಮ ಪಂಚಾಯತ್, ಸಂಜೀವಿನಿ ಒಕ್ಕೂಟ, ಪಂಚಶಕ್ತಿ ಸಂಘ ಕೋಡಿ ತಲೆ,ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ ಇವರುಗಳ ಸಹಯೋಗದೊಂದಿಗೆ ಕೋಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ವಿ ಅಧ್ಯಕ್ಷತೆ ವಹಿಸಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿದರು.

ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯದರ್ಶಿ ವಸಂತಿ ಹಂದಟ್ಟು, ಯುವಕ ಮಂಡಲದ ಸಂಘಟನಾ ಕಾರ್ಯದರ್ಶಿ ಗಿರೀಶ್ ಆಚಾರ್, ಪಂಚಶಕ್ತಿ ಸಂಘ ಕೋಡಿ ತಲೆ ಕಾರ್ಯದರ್ಶಿ ಸಂದೀಪ್, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ದೀಪಾ ಕಾರ್ವಿ, ಕೋಡಿ ಹೊಸಬೇಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್, ಮಣೂರು ಫ್ರೆಂಡ್ಸ್ ಮಾಜಿ ಅಧ್ಯಕ್ಷ ದಿನೇಶ್ ಆಚಾರ್, ಎಸ್ ಎಲ್ ಆರ್ ಎಂ ಘಟಕದ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು. ಪಂಚವರ್ಣದ ಸದಸ್ಯ ರವೀಂದ್ರ ಕೋಟ ನಿರೂಪಿಸಿ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!