Sunday, February 23, 2025
Sunday, February 23, 2025

ಡಿ.11: ಗಂಗೊಳ್ಳಿಯಲ್ಲಿ ಮಕ್ಕಳ ಸಂತೆ ಮತ್ತು ವಿಜ್ಞಾನ ಮಾದರಿ ಸ್ಪರ್ಧೆ

ಡಿ.11: ಗಂಗೊಳ್ಳಿಯಲ್ಲಿ ಮಕ್ಕಳ ಸಂತೆ ಮತ್ತು ವಿಜ್ಞಾನ ಮಾದರಿ ಸ್ಪರ್ಧೆ

Date:

ಕುಂದಾಪುರ, ಡಿ.9: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ವಿದ್ಯಾರ್ಥಿಗಳಿಂದ ಮಕ್ಕಳ ಸಂತೆ ಬಿಜಿನೆಸ್ ಡೇ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರದರ್ಶನ ಮತ್ತು ಸ್ಪರ್ಧೆ ಕಾರ್ಯಕ್ರಮವು ಬುಧವಾರ 11.12.2024 ರಂದು ಬೆಳಗ್ಗೆ 9:00 ರಿಂದ 4 ಗಂಟೆಯ ತನಕ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿನೋದ್ ಪೈ ಮಕ್ಕಳ ಸಂತೆಯನ್ನು ಉದ್ಘಾಟಿಸಲಿದ್ದು ಪ್ರದೀಪ್ ಕುಮಾರ್ ಶೆಟ್ಟಿ ಅವರು ವಿಜ್ಞಾನ ಮಾದರಿ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಗಂಗೊಳ್ಳಿಯ ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳಾದ ಗೋಪಾಲ ದೇವಾಡಿಗ, ರಾಘವೇಂದ್ರ ಶೇರುಗಾರ್, ಭಗಿನಿ ಕ್ರೆಸೆನ್ಸ್, ಸಭಾ ಭಾನು ಮತ್ತು ಸುಮಯ್ಯ ಮಕ್ಕಳ ಸಂತೆಯ ವಿವಿಧ ಮಳಿಗೆಗಳನ್ನು ಉದ್ಘಾಟಿಸಲಿದ್ದಾರೆ. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಲಿದ್ದು, ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಕ್ಕಳ ಸಂತೆಯಲ್ಲಿ ಭೂತದ ಮನೆ, ಫುಡ್ ಜೋನ್, ವಿ ಆರ್ ಎಫೆಕ್ಟ್, ಬಟ್ಟೆ ಮಳಿಗೆಗಳು ವಿಶೇಷ ಆಕರ್ಷಣೆಯಾಗಿರಲಿವೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!