Sunday, February 23, 2025
Sunday, February 23, 2025

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ: ಡಿ. 13 ಕ್ಕೆ ಮರು ನಿಗದಿ

ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ: ಡಿ. 13 ಕ್ಕೆ ಮರು ನಿಗದಿ

Date:

ಉಡುಪಿ, ಡಿ.10: ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ರಾಜ್ಯಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಕೃಷಿ ಇಲಾಖೆಯ ವತಿಯಿಂದ ಡಿಸೆಂಬರ್ 12 ರಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಕಾರಣಾಂತರಗಳಿಂದ ಮುಂದೂಡಿ, ಡಿಸೆಂಬರ್ 13 ರಂದು ಮರು ನಿಗದಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಕೃಷಿ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ನಮೂದಿಸಿದ ತಿನಿಸುಗಳನ್ನು ಮನೆಯಲ್ಲಿಯೇ ತಯಾರಿಸಿ, ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಡಿ. 13 ರಂದು ಬೆಳಗ್ಗೆ 11 ಗಂಟೆಗೆ ಪ್ರದರ್ಶಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ತಯಾರಿಸುವ ಖಾದ್ಯ, ಬೇಕಾಗುವ ಸಾಮಾಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿಸೆಂಬರ್ 11 ರ ಒಳಗಾಗಿ ಇ-ಮೇಲ್ ವಿಳಾಸ [email protected] ಅಥವಾ ಖುದ್ದಾಗಿ / ಪೋಸ್ಟ್ ಮೂಲಕ ಜಂಟಿ ಕೃಷಿ ನಿರ್ದೇಶಕರ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ವಿಳಾಸಕ್ಕೆ ಕಳುಹಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!