Sunday, February 23, 2025
Sunday, February 23, 2025

ಕೆ.ಎಂ.ಸಿ: 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

ಕೆ.ಎಂ.ಸಿ: 15 ನೇ ವರ್ಷದ ಕ್ರಿಸ್ಟಲ್ ಜುಬಿಲಿ ಆಚರಣೆ

Date:

ಮಣಿಪಾಲ, ಡಿ.12: ಕೆಎಂಸಿ ಮಣಿಪಾಲದ ಹೃದ್ರೋಗ ವಿಭಾಗ ಮತ್ತು ಹೃದಯರಕ್ತನಾಳದ ತಂತ್ರಜ್ಞಾನ ವಿಭಾಗ (ಸಿವಿಟಿ), ಎಂಸಿಎಚ್.ಪಿ, ಮಾಹೆ ಮಣಿಪಾಲ ಮಣಿಪಾಲ್ ಕಾರ್ಡಿಯಾಲಜಿ ಅಪ್ಡೇಟ್ 2024 ಸಮ್ಮೇಳನ ಆಯೋಜಿಸಿತ್ತು. 15 ನೇ ವರ್ಷದ ಕ್ರಿಸ್ಟಲ್ ಜುಬಿಲಿಯನ್ನು ಆಚರಿಸಿತು. ಈ ಮೈಲಿಗಲ್ಲಿನ ಕಾರ್ಯಕ್ರಮವು ಹೃದ್ರೋಗದಲ್ಲಿನ ಒಳನೋಟವುಳ್ಳ ಚರ್ಚೆಗಳು, ಶೈಕ್ಷಣಿಕ ವಿನಿಮಯಗಳು ಮತ್ತು ಹೃದ್ರೋಗಶಾಸ್ತ್ರದ ಪ್ರವರ್ತಕರಿಗೆ ಗೌರವ ನೀಡಿತು.

ಪ್ರತೀ ವರ್ಷ ಒಂದು ವಿಷಯದ ಮೇಲೆ ನಡೆಯುವ ಈ ಸಮ್ಮೇಳನದ ಈ ವರ್ಷದ ವಿಷಯ “ಹೃದಯ ವೈಫಲ್ಯ”. ದೇಶದ ಪ್ರತಿಷ್ಠಿತ ಸಂಸ್ಥೆಗಳ ಪ್ರಖ್ಯಾತ ಸಂಪನ್ಮೂಲ ವ್ಯಕ್ತಿಗಳು ಈ ನಿರ್ಣಾಯಕ ವಿಷಯದ ವಿವಿಧ ಅಂಶಗಳ ಕುರಿತು ಭಾಷಣಗಳನ್ನು ನೀಡಿದರು. ಮಾಹೆಯ ಸಂಸ್ಥಾಪಕ ಡಾ.ಟಿ.ಎಂ.ಎ ಪೈ ಮತ್ತು ಇತ್ತೀಚೆಗೆ ನಿಧನರಾದ ಕೆಎಂಸಿ ಮಣಿಪಾಲದ ಹೃದ್ರೋಗ ವಿಭಾಗದ ಸ್ಥಾಪಕ ಮುಖ್ಯಸ್ಥ ದಿವಂಗತ ಡಾ.ಎಸ್.ಜಿ.ಎಸ್.ಪ್ರಭು ಅವರಿಗೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಸಮ್ಮೇಳನ ಆರಂಭವಾಯಿತು.

ಯುವ ವಿಜ್ಞಾನಿಗಳಲ್ಲಿ ಸಂಶೋಧನೆ ಮತ್ತು ಆವಿಷ್ಕಾರವನ್ನು ಉತ್ತೇಜಿಸಲು, ಸಮ್ಮೇಲನವು ಪೇಪರ್ ಮತ್ತು ಪೋಸ್ಟರ್ ಪ್ರಸ್ತುತಿಗಳನ್ನು ಒಳಗೊಂಡಿತ್ತು, ಉತ್ತಮ ಪ್ರಸ್ತುತಿಗಳಿಗೆ ಪ್ರಶಸ್ತಿಗಳನ್ನು ನೀಡಲಾಯಿತು. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹೃದ್ರೋಗಶಾಸ್ತ್ರದ ರಸಪ್ರಶ್ನೆಯು ಸಮ್ಮೇಳನಕ್ಕೆ ಆಕರ್ಷಕ ಮತ್ತು ಸ್ಪರ್ಧಾತ್ಮಕ ಅಂಚನ್ನು ಸೇರಿಸಿತು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕೆಎಂಸಿ ಮಣಿಪಾಲದ ಡೀನ್ ಡಾ.ಪದ್ಮರಾಜ್ ಹೆಗ್ಡೆ ವಹಿಸಿದ್ದರು. ಕಸ್ತೂರ್ಬಾ ಆಸ್ಪತ್ರೆಯ ಉಪ ವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ ಉಪಸ್ಥಿತರಿದ್ದರು. ಸಂಘಟನಾ ಮುಖ್ಯಸ್ಥ ಹಾಗೂ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ಪದ್ಮಕುಮಾರ್, ಸ್ವಾಗತಿಸಿದರು, ಸಂಘಟನಾ ಕಾರ್ಯದರ್ಶಿ ಡಾ.ಕನ್ಹಯ್ಯ ಲಾಲನಿ ವಂದಿಸಿದರು. ಮತ್ತೋರ್ವ ಸಂಘಟನಾ ಕಾರ್ಯದರ್ಶಿ ಡಾ.ಕೃಷ್ಣಾನಂದ ನಾಯಕ್, ಪ್ರಮುಖ ಹೃದ್ರೋಗ ತಜ್ಞರಾದ ಡಾ.ವಿಜಯಲಕ್ಷ್ಮಿ, ಡಾ.ವಿ.ಎಸ್.ಪ್ರಕಾಶ್, ಡಾ.ಪ್ರಭಾವತಿ, ಡಾ.ಬಿ.ವಿ.ಮಂಜುನಾಥ್, ಡಾ.ಸುಬ್ರಮಣ್ಯಂ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!