Monday, February 24, 2025
Monday, February 24, 2025

ಚಿಕ್ಕಮಗಳೂರು-ತಿರುಪತಿ ನಡುವೆ ಹೊಸ ರೈಲು ಮಂಜುರಾತಿಗೆ ಸಂಸದ ಕೋಟ ಮನವಿ

ಚಿಕ್ಕಮಗಳೂರು-ತಿರುಪತಿ ನಡುವೆ ಹೊಸ ರೈಲು ಮಂಜುರಾತಿಗೆ ಸಂಸದ ಕೋಟ ಮನವಿ

Date:

ನವದೆಹಲಿ, ಡಿ.15: ಚಿಕ್ಕಮಗಳೂರು-ತಿರುಪತಿ ನಡುವೆ ಹೊಸ ರೈಲು ಮಂಜುರಾತಿಗೆ ರೈಲ್ವೆ ಸಚಿವರಾದ ವಿ.ಸೋಮಣ್ಣರವರ ಜೊತೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಚರ್ಚಿಸಿದರು. ಚಿಕ್ಕಮಗಳೂರಿನಿಂದ ಹೊರಟು ಬೆಂಗಳೂರು ಮಾರ್ಗವಾಗಿ ಹಿಂದುಗಳ ಪವಿತ್ರ ಯಾತ್ರಾಸ್ಥಳವಾದ ತಿರುಪತಿಗೆ ನೂತನ ರೈಲನ್ನು ಮಂಜೂರು ಮಾಡಬೇಕೆಂದು ರೈಲ್ವೆ ರಾಜ್ಯ ಸಚಿವ ಸೋಮಣ್ಣ ಅವರೊಂದಿಗೆ ಚರ್ಚೆ ನಡೆಸಿ ಮನವಿ ನೀಡಲಾಯಿತು. ಈಗಿರುವ ಸ್ಥಿತಿಯಲ್ಲಿ ಚಿಕ್ಕಮಗಳೂರು ಜನತೆಗೆ ಮತ್ತಷ್ಟು ರೈಲ್ವೆ ಸೇವೆಯ ಅಗತ್ಯವಿದ್ದು ನೂತನ ರೈಲ್ವೆ ಯೋಜನೆ ಪ್ರಯಾಣಿಕರಿಗೆ ಸಹಕಾರಿಯಾಗಲಿದೆ. ಎಂದು ವಿವರಿಸಲಾಯಿತು. ಸ್ಥಳದಲ್ಲಿ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ತಯಾರಿಕೆಗೆ ನೂತನ ರೈಲ್ವೆ ಮಂಜೂರಾತಿಗೆ ಕಡತ ಮಂಡಿಸುವಂತೆ ಸಚಿವ ಸೋಮಣ್ಣ ನಿರ್ದೇಶನ ನೀಡಿದ್ದಾರೆ. ಮತ್ತು ಕ್ರೈಸ್ತ ಸಮುದಾಯದ ಮನವಿ ಮೇರೆಗೆ ವೆಲಂಕಣಿಗೆ ಕ್ರಿಸ್ಮಸ್ ವಿಶೇಷ ರೈಲ್ವೆಯ ಅವಕಾಶ ಕಲ್ಪಿಸುವುದಾಗಿ ಸೋಮಣ್ಣ ಅವರು ಕೋಟ ಅವರಿಗೆ ತಿಳಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!