Monday, February 24, 2025
Monday, February 24, 2025

ಗೆಳೆಯರ ಬಳಗ ಕಾರ್ಕಡ: ಗೋಶಾಲೆಗೆ ಒಣಮೇವು ಹಸ್ತಾಂತರ

ಗೆಳೆಯರ ಬಳಗ ಕಾರ್ಕಡ: ಗೋಶಾಲೆಗೆ ಒಣಮೇವು ಹಸ್ತಾಂತರ

Date:

ಕೋಟ, ಡಿ.16: ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮ ನೇತೃತ್ವದಲ್ಲಿ ಕಾರ್ಕಡ ಗ್ರಾಮಸ್ಥರ ಮೂಲಕ ಸಂಗ್ರಹಿಸಿದ ಎರಡು ಲೋಡ್ ಒಣಮೇವುನ್ನು ಭಾನುವಾರ ಹೆಬ್ರಿ ಶ್ರೀ ವಿಶ್ವೇಶ ಕೃಷ್ಣ ಗೋಶಾಲೆಗೆ ಗೆಳೆಯರ ಬಳಗದ ಅಧ್ಯಕ್ಷ ಕೆ.ತಾರಾನಾಥ್ ಹೊಳ್ಳ ಹಸ್ತಾಂತರಿಸಿದರು. ಗೋಶಾಲೆಯ ವ್ಯವಸ್ಥಾಪಕ ಸುಬ್ರಹ್ಮಣ್ಯ ಅವರು ಮಾತನಾಡುತ್ತಾ, ಗೆಳೆಯರ ಬಳಗದ ಸದಸ್ಯರಿಗೆ ಗೋವಿನ ಮೇಲಿರುವ ಪ್ರೀತಿ – ಭಕ್ತಿ ಅವರ ಈ ಸೇವೆಗೆ ಸಾಕ್ಷಿ. ಈ ಕಾರ್ಯಕ್ಕೆ ಗೋಮಾತೆ ಮತ್ತು ಶ್ರೀ ಕೃಷ್ಣ ಮುಖ್ಯಪ್ರಾಣರು ಅನುಗ್ರಹಿಸಲಿ ಎಂದರು. ಗೋ ಶಾಲೆಯ ವಿಶ್ವಸ್ಥ ಮಂಡಳಿಯ ಸಿ.ಎ ರವಿರಾವ್, ಗೆಳೆಯರ ಬಳಗದ ಉಪಾಧ್ಯಕ್ಷ ಕೆ. ಶಶಿಧರ ಮಯ್ಯ, ಕಾರ್ಯದರ್ಶಿ ಕೆ. ಶೀನ, ಕೆ. ಜಗದೀಶ ಆಚಾರ್ಯ,ಕೆ. ಶೇಖರ ಬಡಾಹೋಳಿ, ಹಾಗೂ ಕೆ. ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!