Monday, February 24, 2025
Monday, February 24, 2025

ಉಡುಪಿ: ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

ಉಡುಪಿ: ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

Date:

ಉಡುಪಿ, ಡಿ.17: ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೂಡಂಗಡಿಗಳು ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ತೊಂದರೆ ನೀಡುವಂತಿರಬಾರದು, ಫಾಸ್ಟ್ ಫುಡ್ ಅಥವಾ ರಸ್ತೆ ಬದಿಗಳಲ್ಲಿ ಗೂಡಂಗಡಿಗಳ ಮೂಲಕ ಹೋಟೆಲ್ ನಡೆಸುವವರು ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಆಹಾರ ಗುಣಮಟ್ಟತೆ ಮತ್ತು ಸುರಕ್ಷತಾ ಇಲಾಖೆಯಿಂದ ಪರವಾನಿಗೆ ಪಡೆದಿರಬೇಕು ಹಾಗೂ ಯಾವುದೇ ಗೂಡಂಗಡಿಗಳಲ್ಲಿ ತಂಬಾಕು ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಬೀದಿ ಬದಿಯಲ್ಲಿ ವ್ಯಾಪಾರಸ್ತರು ಹಾಗೂ ಗೂಡಂಗಡಿ ಮಾಲೀಕರು ನಗರಸಭೆ ಸೂಚಿಸಿರುವ ನಿಯಮವನ್ನು ಪಾಲಿಸದೇ ಇದ್ದಲ್ಲಿ ಅಂತಹ ಗೂಡಂಗಡಿ ಮಾಲೀಕರಿಗೆ 5000 ರೂ. ದಂಡ ವಿಧಿಸಿ, ಗೂಡಂಗಡಿಯನ್ನು ತೆರವುಗೊಳಿಸಿ ಪರವಾನಿಗೆ ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!