Monday, February 24, 2025
Monday, February 24, 2025

ಎಸ್.ವಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟ

ಎಸ್.ವಿ.ಪಿ.ಎಲ್ ಕ್ರಿಕೆಟ್ ಪಂದ್ಯಾಟ

Date:

ಗಂಗೊಳ್ಳಿ, ಡಿ.17: ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಿಠಲ ಶೆಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್.ವಿ.ಪಿ.ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಯಾಗಿ ಜಿ.ಎಸ್‌.ವಿ.ಎಸ್ ಅಸೋಸಿಯೇಷನ್ ನ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಸಂಚಾಲಕರಾದ ಸದಾಶಿವ ನಾಯಕ್ ಎನ್., ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಖಜಾಂಜಿ ಅಶ್ವಿನ್ ನಾಯಕ್, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್, ಉಪನ್ಯಾಸಕಿ ಸುಗುಣ ಆರ್. ಕೆ., ವಿದ್ಯಾರ್ಥಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಸರಸ್ವತಿ ವಿದ್ಯಾಲಯ ಹಮ್ಮಿಕೊಂಡ ವಿವಿಧ ಕ್ರೀಡಾಕೂಟಗಳ ಯಶಸ್ವಿಗೆ ಶ್ರಮಿಸಿದ ವಿವಿಧ ಕ್ರೀಡಾಳುಗಳನ್ನು ಅಭಿನಂದಿಸಿ ಗೌರವಿಸಲಾಯಿತು. ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಪ್ರಾಸ್ತಾವಿಕವಾಗಿ ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ ಸ್ವಾಗತಿಸಿ, ಶ್ರೇಯಲ್ ವಂದಿಸಿದರು. ಸುಶ್ಮಿತಾ ಗಾಣಿಗ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!