Sunday, February 23, 2025
Sunday, February 23, 2025

ರಸ್ತೆ ನಿರ್ಮಾಣ ಜನಪ್ರತಿನಿಧಿಯ ಜವಾಬ್ದಾರಿ: ವಿಜಯ್ ಕೊಡವೂರು

ರಸ್ತೆ ನಿರ್ಮಾಣ ಜನಪ್ರತಿನಿಧಿಯ ಜವಾಬ್ದಾರಿ: ವಿಜಯ್ ಕೊಡವೂರು

Date:

ಕೊಡವೂರು, ಡಿ.19: ಕೊಡವೂರು ವಾರ್ಡಿನ ಚೆನ್ನಂಗಡಿ ಪರಿಸರದಲ್ಲಿ ಸರಕಾರದ ವತಿಯಿಂದ ನಿರ್ಮಾಣವಾದ ಹೊಸ ರಸ್ತೆಯನ್ನು ಉಡುಪಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕೊಡವೂರು ವಾರ್ಡಿನಲ್ಲಿ ಕಳೆದ 4 ವರ್ಷದಿಂದ
ಅನೇಕ ರಸ್ತೆಗಳು ನಿರ್ಮಾಣ ಆಗಿವೆ. ಮೂಲಸೌಕರ್ಯದ ಅಗತ್ಯತೆಯನ್ನು ತಿಳಿದುಕೊಂಡು, ರಸ್ತೆ ನಿರ್ಮಾಣಕ್ಕೆ ಬೇಕಾಗದ ಸ್ಥಳವನ್ನು ನಾಗರಿಕರಿಗೆ ಮನವರಿಕೆ ಮಾಡಿ ಹೊಸ ರಸ್ತೆಯನ್ನು ನಿರ್ಮಾಣ ಮಾಡುವ ಕಾರ್ಯ ನಡೆಯುತ್ತಿದೆ. ಕೊಡವೂರು ವಾರ್ಡಿನ ಚೆನ್ನಂಗಡಿ ಪರಿಸರದಲ್ಲಿ ಹಲವಾರು ವರ್ಷಗಳಿಂದ ಮಣ್ಣಿನ ರಸ್ತೆ, ಓಣಿಯಲ್ಲಿ ನಡೆದುಕೊಂಡು ಹೋಗುವ ಪರಿಸ್ಥಿತಿ. ಮಳೆಗಾಲದ ಸಮಯದಲ್ಲಿ ತಗ್ಗು ಪ್ರದೇಶವಾಗಿರುವುದರಿಂದ ರಸ್ತೆಯಲ್ಲಿ ನೀರು ನಿಂತು ಕೆಸರಿನಿಂದ ನಡೆದುಕೊಂಡು ಹೊಡುವ ಪರಿಸ್ಥಿತಿ. ಇದನ್ನು ತಿಳಿದು ಸ್ಥಳೀಯರೊಂದಿಗೆ ಮಾತನಾಡಿ ಮನವರಿಕೆ ಮಾಡಿ ರಸ್ತೆ ನಿರ್ಮಾಣಕ್ಕೆ ತಮ್ಮ ತಮ್ಮ ಜಾಗವನ್ನು ನೀಡಿ ಸರ್ಕಾರದ ಮತ್ತು ನಗರಸಭೆಯ ವತಿಯಿಂದ ಹೊಸ ರಸ್ತೆ ನಿರ್ಮಾಣ ಮಾಡಿ ಉದ್ಘಾಟನೆಯನ್ನು ನೆರವೇರಿಸಲಾಗಿದೆ ಎಂದರು. ಸ್ಥಳೀಯರಾದ ಧನಂಜಯ್, ಯಾದವ್, ನವೀನ್, ದೂಜ ಲೂಯಿಸ್, ಮಗ್ಗಿಬಾಯಮ್ಮ, ವಿಮಲ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!