Notice: Function WP_Block_Metadata_Registry::register_collection was called incorrectly. Block metadata collections can only be registered for a specific plugin. The provided path is neither a core path nor a valid plugin path. Please see Debugging in WordPress for more information. (This message was added in version 6.7.0.) in /opt/bitnami/wordpress/wp-includes/functions.php on line 6114
ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ - Namma Udupi Bulletin
Friday, December 20, 2024
Friday, December 20, 2024

ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

ಡಿ.22: ಜ್ಞಾನಸುಧಾ ಸಂಸ್ಥಾಪಕರ ದಿನಾಚರಣೆ; 3 ನೇ ಹಂತದ ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Date:

ಕಾರ್ಕಳ ಡಿ. 19: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ 22 ಡಿಸೆಂಬರ್ ೨೦೨೪ ಆದಿತ್ಯವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. ಫೌಂಡೇಶನ್‌ನಲ್ಲಿ ತೇರ್ಗಡೆಗೊಂಡ ನಾಲ್ವರು ವಿದ್ಯಾರ್ಥಿಗಳನ್ನು, ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಸಂಸ್ಥೆಯ ಮೂವರು ವಿದ್ಯಾರ್ಥಿಗಳನ್ನು, ಹಾಗೂ ಕಳೆದ ಮೂರು ವರ್ಷಗಳಲ್ಲಿ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಹನ್ನೊಂದು ಪೂರ್ವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು.

ಈ ಸಂದರ್ಭದಲ್ಲಿ ಪ್ರತಿ ಎಂ.ಬಿ.ಬಿ.ಎಸ್ ಸೀಟ್‌ಗೆ (155) ರೂ.2000/-ದಂತೆ ಭಾರತೀಯ ಸೇನೆಗೆ ರೂ. 3,10,000/- ವನ್ನು ದೇಣಿಗೆಯಾಗಿ ನೀಡಲಾಗುವುದು. ಒಟ್ಟು 3 ನೇ ಹಂತದಲ್ಲಿ ಇದೀಗ 7,47,500 ರೂಗಳ ವಿದ್ಯಾರ್ಥಿವೇತನವನ್ನು ವಿತರಿಸಲಾಗುವುದು.

ಅಧ್ಯಕ್ಷತೆಯನ್ನು ಶಾಸಕ ವಿ.ಸುನಿಲ್ ಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ. ಆರ್. ಜಿ. ಗ್ರೂಪ್‌ಗಳ ಸಂಸ್ಥಾಪಕ ಹಾಗೂ ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹಾಗೂ ತಾಂತ್ರಿಕ ಶಿಕ್ಷಣದ ನಿರ್ದೇಶಕರಾದ ಪ್ರಸನ್ನ ಹೆಚ್., ಐ.ಎ.ಎಸ್. ಹಾಗೂ ಸಂಸ್ಥೆಯ ಪೂರ್ವ ವಿದ್ಯಾರ್ಥಿ ಐ.ಎಂಎಸ್. ಬನಾರಸ್ ವಾರಣಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಗೌತಮ್‌ ಭಟ್ ಎಂ.ಬಿ.ಬಿ.ಎಸ್. ಎಂ.ಎಸ್. ಎಂ.ಸಿಹೆಚ್ (ಸರ್ಜಿಕಲ್‌ ಆಂಕೋಲಜಿ) ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್ಚುವರಿ ಬಸ್ ಖರೀದಿಗೆ ಕ್ರಮ

ಬೆಳಗಾವಿ, ಡಿ.19: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನ ಹಿನ್ನೆಲೆಯಲ್ಲಿ...

ಮುಜರಾಯಿ ಆಸ್ತಿಗಳ ಸಂರಕ್ಷಣೆ

ಬೆಳಗಾವಿ, ಡಿ‌.19: ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ....

ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ

ಬೆಳಗಾವಿ, ಡಿ.19: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಳ್ಳುವ...

ಉಡುಪಿಗೆ ಹೆಚ್ಚುವರಿ ಸರಕಾರಿ ನರ್ಮ್ ಬಸ್ ಮಂಜೂರು ಮಾಡುವಂತೆ ಸಾರಿಗೆ ಸಚಿವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ, ಡಿ.19: ಉಡುಪಿ ನಗರ ಭಾಗದಲ್ಲಿ ಸಾರ್ವಜನಿಕರ ಸೇವೆಗೆ ಹೆಚ್ಚುವರಿ ನರ್ಮ್...
error: Content is protected !!