Sunday, February 23, 2025
Sunday, February 23, 2025

ವಿಶ್ವಕರ್ಮ ಯೋಜನೆ: ನಿರ್ಮಲಾ ಸೀತಾರಾಮನ್‌ರವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ

ವಿಶ್ವಕರ್ಮ ಯೋಜನೆ: ನಿರ್ಮಲಾ ಸೀತಾರಾಮನ್‌ರವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ

Date:

ಉಡುಪಿ, ಡಿ.20: ವಿಶ್ವಕರ್ಮ ಯೋಜನೆಗೆ ಕರ್ನಾಟಕ ರಾಜ್ಯದಲ್ಲಿ 11 ಲಕ್ಷಕ್ಕೂ ಮಿಕ್ಕ ಅರ್ಜಿ ಸಲ್ಲಿಸಿದ್ದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ 60 ಸಾವಿರಕ್ಕೂ ಮಿಕ್ಕ ಆಸಕ್ತ ಬಡವರು ಯೋಜನೆಗೆ ಅರ್ಜಿ ಹಾಕಿದ್ದಾರೆ. ಈಗಾಗಲೇ 7 ಸಾವಿರಕ್ಕೂ ಮಿಕ್ಕ ಫಲಾನುಭವಿಗಳು ತರಬೇತಿ ಪಡೆದಿದ್ದು ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ವಿಶ್ವಕರ್ಮ ಯೋಜನೆಯ ಕರಕುಶಲ ಕರ್ಮಿಗಳಿಗೆ ವಿಳಂಬವಿಲ್ಲದೆ ಸಾಲ ನೀಡಲು ನಿರ್ದೇಶನ ನೀಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ರವರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿ ಚರ್ಚಿಸಿದರು.

ವಿಶ್ವಕರ್ಮ ಯೋಜನೆಗೆ ಕೆಲವು ರಾಷ್ಟ್ರೀಕೃತ ಬ್ಯಾಂಕುಗಳು ಮಾತ್ರ ಉತ್ತಮವಾಗಿ ಸ್ಪಂದಿಸುತ್ತಿದ್ದರೂ ಇತರ ಕೆಲವು ಬ್ಯಾಂಕಿನ ಬ್ರಾಂಚ್ ಗಳಲ್ಲಿ ನಿಗದಿತ 250 ರೂಪಾಯಿಗಿಂತ ಹೆಚ್ಚು ಮೊತ್ತದ ಅಫೀತವಿತ್ ಕೇಳುವುದು, ಕೋವಿಡ್ ಸಂಕಷ್ಟಕಾಲದಲ್ಲಿ ತೆಗೆದು ಸಾಲ ಪಾವತಿ ಮಾಡಿದ್ದರೂ ಸಿಬಲ್ ಉಲ್ಲೇಖ ಮಾಡಿ ಸಾಲ ನಿರಾಕರಿಸುವುದು, ಕೆಲವೆಡೆ ಜಿ.ಎಸ್.ಟಿ ಬಿಲ್ಲುಗಳನ್ನು ಕೇಳುತ್ತಾ ಇರುವುದರಿಂದ ವಿಶ್ವಕರ್ಮ ಕುಲ ಕಸುಬುದಾರರು ಸಾಲಕ್ಕಾಗಿ ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಿಗೆ ವಿಳಂಬವಿಲ್ಲದೆ ಕೇಂದ್ರ ಸರಕಾರದ ಭದ್ರತೆ ಹೊಂದಿರುವ ವಿಶ್ವಕರ್ಮ ಯೋಜನೆಯ ಅರ್ಜಿದಾರರಿಗೆ ಸಾಲ ನೀಡುವಂತೆ ನಿರ್ದೇಶನ ನೀಡಬೇಕೆಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮನವಿ ಮಾಡಿದರು.

ಮನವಿಯನ್ನು ಆಲಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ತಕ್ಷಣ ಕ್ರಮ ಜರುಗಿಸಿ ಸಾಲ ಸೌಲಭ್ಯ ನೀಡಲು ಆದೇಶಿಸುವುದಾಗಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ಮಾಜಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇಮಕ

ನವದೆಹಲಿ, ಫೆ.22: ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್...

ಕಾರ್ಕಳ ಜ್ಞಾನಸುಧಾ: ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಗಣಿತನಗರ, ಫೆ.22: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ...

ಸುರಂಗದ ಛಾವಣಿ ಕುಸಿತ; ಸಿಲುಕಿದ ಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ

ಯು.ಬಿ.ಎನ್.ಡಿ., ಫೆ.22: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (ಎಸ್‌ಎಲ್‌ಬಿಸಿ)...
error: Content is protected !!