Monday, February 24, 2025
Monday, February 24, 2025

ಹಸಿ ಕಸ ಗೊಬ್ಬರದಿಂದ ಸಾವಯವ ತರಕಾರಿ ಮಾಡುವ ಸಂಕಲ್ಪ: ವಿಜಯ್ ಕೊಡವೂರು

ಹಸಿ ಕಸ ಗೊಬ್ಬರದಿಂದ ಸಾವಯವ ತರಕಾರಿ ಮಾಡುವ ಸಂಕಲ್ಪ: ವಿಜಯ್ ಕೊಡವೂರು

Date:

ಮಲ್ಪೆ: ಕೊಡವೂರು ವಾರ್ಡ್ ನಲ್ಲಿ ಸಾವಯವ ತರಕಾರಿ ಬೆಳೆಸಿ ಕೆಮಿಕಲ್ ಆಹಾರದಿಂದ ದೂರವಾಗಿ ಉತ್ತಮ ಆರೋಗ್ಯ ನಿರ್ಮಿಸಲು ಸಾಧ್ಯವಿದೆ ಎಂದು ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಹೇಳಿದರು.

ಕೊಡವೂರು ವಾರ್ಡಿನ ವೈಷ್ಣವಿ ಲೇಔಟ್ ಪರಿಸರದಲ್ಲಿ ಸಾಹಸ್ ಸಂಸ್ಥೆ ಮತ್ತು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ವತಿಯಿಂದ ನಡೆದ ಉಚಿತ ತರಕಾರಿ ಬೀಜ ವಿತರಣೆ ಮತ್ತು ಹಸಿ ಕಸದಿಂದ ಗೊಬ್ಬರ ಮಾಡಲು ಉಚಿತ ಕಾಂಪೋಸ್ಟ್ ಡ್ರಮ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಸಿಕಸ ಬಿಸಾಡುವ ವಸ್ತು ಅಲ್ಲ, ಅದರಿಂದ ಡ್ರಮ್ ಕಾಂಪೋಸ್ಟ್ ಗೊಬ್ಬರವನ್ನು ಮಾಡಿ ಆ ಗೊಬ್ಬರವನ್ನು ಮನೆಯಲ್ಲಿ ಸಾವಯವ ತರಕಾರಿ ಮಾಡಿಕೊಂಡು ನಮ್ಮ ಆರೋಗ್ಯವನ್ನು ಕೆಮಿಕಲ್ ಆಹಾರದಿಂದ ದೂರಮಾಡಲು ಸಾಧ್ಯವಿದೆ. ಅದೇ ರೀತಿ ಕ್ಯಾನ್ಸರ್ ರೋಗ ಬರದಂತೆ ತಡೆಗಟ್ಟಲು ಸಾಧ್ಯವಿದೆ.

ಕೊಡವೂರು ವಾರ್ಡ್ ನಲ್ಲಿ ಕ್ಯಾನ್ಸಾರ್ ರೋಗ ಬಾರದಂತೆ ಈ ಒಂದು ಪುಟ್ಟ ಪ್ರಯತ್ನವನ್ನು ಕೊಡವೂರು ನಾಗರಿಕರ ಸಹಯೋಗದಿಂದ ಆಸಕ್ತಿಯಿಂದ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಾಹಸ್ ಸಂಸ್ಥೆಯ ಸೂಪರ್ವೈಸರ್ ಆಗಿರುವ ವಿಶಾಲಾಕ್ಷಿ ದೇವಾಡಿಗ ಇವರು ಸಂಪೂರ್ಣ ಮಾಹಿತಿಯನ್ನು ನೀಡಿದರು.

ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಅಶೋಕ್ ಶೆಟ್ಟಿಗಾರ್ ಸ್ವಾಗತಿಸಿ ವಿನಯ್ ಗರ್ಡೆ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!