Monday, February 24, 2025
Monday, February 24, 2025

ಕೊಡವೂರು ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಅಭಿನಂದನೆ

ಕೊಡವೂರು ನಾರಾಯಣ ಬಲ್ಲಾಳ್ ರವರಿಗೆ ನಾಗರಿಕ ಅಭಿನಂದನೆ

Date:

ಉಡುಪಿ, ಡಿ.23: ನಾರಾಯಣ ಬಲ್ಲಾಳ್ ರವರಿಗೆ ಸಹಕಾರ ರತ್ನ ಪುರಸ್ಕಾರ ದೊರೆತ ಸಂಧರ್ಭದಲ್ಲಿ ಅಭಿನಂದನಾ ಸಮಿತಿಯ ವತಿಯಿಂದ ನಾಗರಿಕ ಅಭಿನಂದನಾ ಕಾರ್ಯಕ್ರಮ ಕೊಡವೂರು ಶಾಲಾ ವಠಾರದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಹಕಾರಿ ಜಯಕರ ಶೆಟ್ಟಿ ಇಂದ್ರಾಳಿಯವರು ವಾಣಿಜ್ಯ ಸಂಸ್ಥೆಗಳಿಗಿಂತ ಸಹಕಾರಿ ಸಂಸ್ಥೆಗಳು ಜನಸಾಮಾನ್ಯರ ಅಗತ್ಯತೆಗಳಿಗೆ ಬಹು ವೇಗವಾಗಿ, ಉತ್ತಮವಾಗಿ ಸ್ಪಂದಿಸಿ ಅವರ ಆರ್ಥಿಕ ಅವಶ್ಯಕತೆಗಳಿಗೆ ಪರಿಹಾರ ನೀಡುವ ಕಾರಣ ಇದೀಗ ಸಹಕಾರಿ ಕ್ಷೇತ್ರ ಉತ್ತುಂಗದಲ್ಲಿದೆ. ಅದಕ್ಕೆ ನಾರಾಯಣ ಬಲ್ಲಾಳ್ ರಂತಹ ಸಹಕಾರಿ ಧುರೀಣರು ಹಾಗೂ ಸಿಬ್ಬಂದಿಗಳು ಕಾರಣ ಎಂದು ಶ್ಲಾಘಿಸಿದರು. ತಮ್ಮ ಹುಟ್ಟೂರಲ್ಲಿಯೇ ಆತ್ಮೀಯರ ಮಧ್ಯೆ ಇಂತಹ ಸನ್ಮಾನ ಅರ್ಥಪೂರ್ಣ ಎಂದರು.

ಸಹಕಾರಿ ಧುರೀಣ ಮೋಹನ ಉಪಾಧ್ಯ, ಖ್ಯಾತ ದಸ್ತಾವೇಜು ಬರಹಗಾರ ರತ್ನಕುಮಾರ್, ಅಭಿನಂದನಾ ಸಮಿತಿಯ ಅಧ್ಯಕ್ಷ ಸಾಧು ಸಾಲಿಯನ್, ಅಶೋಕ್ ಕುಮಾರ್ ಮೆರ್ಮಾಡಿ, ಅರುಣ್ ಕುಮಾರ್ ಶೆಟ್ಟಿ, ನಾಗರತ್ನ ಬಲ್ಲಾಳ್, ಹರೀಶ್ ಕೊಡವೂರು, ದೀಪಕ್ ಕೊಡವೂರು, ಸಂದೇಶ್, ಜೀವನ್ ಕುಮಾರ್ ಪಾಳೆಕಟ್ಟೆ, ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.

ಸಾಹಿತಿ ಪೂರ್ಣಿಮಾ ಜನಾರ್ದನ್ ಅಭಿನಂದನ ಮಾತುಗಳನ್ನು ಆಡಿದರು. ನಗರಸಭಾ ಸದಸ್ಯ ಹಾಗೂ ಅಭಿನಂದನಾ ಸಮಿತಿಯ ಸಂಚಾಲಕ ವಿಜಯ ಕೊಡವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಭಾತ್ ಕೊಡವೂರು ಸ್ವಾಗತಿಸಿ, ಸಮಿತಿಯ ಕಾರ್ಯದರ್ಶಿ ಜನಾರ್ದನ ಕೊಡವೂರು ವಂದಿಸಿದರು. ಶೃತಿ ಸುಕುಮಾರ್ ಪ್ರಾರ್ಥಿಸಿದರು. ಸತೀಶ್ ಕೊಡವೂರು ನಿರೂಪಿಸಿದರು. ಅಭಿನಂದನಾ ಸಭಾ ಕಾರ್ಯಕ್ರಮದ ಬಳಿಕ ರಂಗ ತರಂಗ ಕಾಪು ವತಿಯಿಂದ ಕುಟ್ಟಿಯಣ್ಣನ ಕುಟುಂಬ ಸಾಮಾಜಿಕ ನಾಟಕ ನಡೆಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ- ಶ್ರೀಕೃಷ್ಣ ಮಠದ ವತಿಯಿಂದ ಹೊರೆಕಾಣಿಕೆ

ಉಡುಪಿ, ಫೆ.23: ಕಾಪು ಹೊಸ ಮಾರಿಗುಡಿ ದೇವಸ್ಥಾನದ ಕಾಪು ಅಮ್ಮನ ಪ್ರತಿಷ್ಠಾ...

ಕುಕ್ಕಿಕಟ್ಟೆ ಶ್ರೀಕೃಷ್ಣ ಬಾಲನಿಕೇತನಕ್ಕೆ ಲ್ಯಾಪ್ ಟಾಪ್ ಪ್ರೊಜೆಕ್ಟರ್ ಕೊಡುಗೆ

ಕುಕ್ಕಿಕಟ್ಟೆ, ಫೆ.23: ಮಣಿಪಾಲದ ಟಾಪ್ಮಿಅಲ್ಯುಮ್ನಿ ಅಸೋಸಿಯೇಷನ್ ನಿಂದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ...

ಕೊಹ್ಲಿ ಶತಕ; ಪಾಕಿಸ್ತಾನ ವಿರುದ್ಧ ಭಾರತ ದಿಗ್ವಿಜಯ

ಯು.ಬಿ.ಎನ್.ಡಿ., ಫೆ.23: ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಹೈ...

ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ, ಫೆ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಪ್ರತಿಷ್ಠಿತ ಡಾ....
error: Content is protected !!